ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ

ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕೊರೋನಾ ವೈರಸ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ 52 ಮಂದಿಯ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ವರದಿ ಬಂದಿದ್ದು, ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ತುಮಕೂರಿನಲ್ಲಿ ಚೀನಾ ಮೂಲಕ ವಿದ್ಯಾರ್ಥಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವುದು ಈ ಹಿಂದೆ ವರದಿಯಾಗಿತ್ತು. 

ವ್ಯಕ್ತಿಯನ್ನು ತಪಾಸಣೆಗೊಳಪಡಿಸಲಾಗಿದ್ದು, ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪರೀಕ್ಷೆ ಬಳಿಕ ಸೋಂಕಿಲ್ಲದಿರುವುದು ದೃಢಪಟ್ಟಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ 28 ದಿನಗಳ ಕಾಲ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಬುಧವಾರ 6 ಮಂದಿ ಹೊಸ ಪ್ರಯಾಣಿಕರು ನಿಗಾದಲ್ಲಿರಲು ನೋಂದಣಿಯಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟಿಲ್ಲ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT