ವಾಲಿದ ಕಟ್ಟಡ 
ರಾಜ್ಯ

ಬೆಂಗಳೂರು: ಏಕಾಏಕಿ ವಾಲಿದ ನಾಲ್ಕು ಅಂತಸ್ತಿನ ಕಟ್ಟಡ; ತಪ್ಪಿದ ದುರಂತ

ಹೆಬ್ಬಾಳದ ಕೆಂಪಾಪುರದಲ್ಲಿರುವ ನಾಲ್ಕು ಅಂತಸ್ತಿನ ಪಿಜಿ ಕಟ್ಟಡ  ವಾಲಿದ್ದು ಕಟ್ಟಡದಲ್ಲಿದ್ದ 30 ಮಂದಿ ಸೇರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದವರನ್ನು ತೆರವುಗೊಳಿಸಲಾಗಿದೆ.

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿರುವ ನಾಲ್ಕು ಅಂತಸ್ತಿನ ಪಿಜಿ ಕಟ್ಟಡ  ವಾಲಿದ್ದು ಕಟ್ಟಡದಲ್ಲಿದ್ದ 30 ಮಂದಿ ಸೇರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದವರನ್ನು ತೆರವುಗೊಳಿಸಲಾಗಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ವಾಲಿದ ಕಟ್ಟಡವನ್ನು ನೆಲಸಮ ಮಾಡಲು ತೀರ್ಮಾನಿಸಿದ್ದಾರೆ. 

ಘಟನೆಗೆ ಕಾರಣವಾದ ಸಮೀಪದ ನಿವೇಶನದ ಮಾಲೀಕ, ಗುತ್ತಿಗೆದಾರ ಮತ್ತು ಎಂಜಿನಿಯರ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಬಿಬಿಎಂಪಿ ಆಯುಕ್ತರು ಸೂಚಿಸಿದ್ದಾರೆ.

ಸುಮಾ ಪಬ್ಲಿಕ್ ಶಾಲೆ ಸಮೀಪದ ರಾಹುಲ್ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ತುಳಸಿ ಎಂಬವರು ‘ಹರ್ಷಿತ್’ ಹೆಸರಿನ ಪಿಜಿ ಕಟ್ಟಡ ನಡೆಸುತ್ತಿದ್ದರು. ನಾಲ್ಕು ಅಂತಸ್ತಿನ ಈ ಕಟ್ಟಡದಲ್ಲಿದ್ದ ಪಿ.ಜಿಯಲ್ಲಿ 30 ಮಂದಿ ಇದ್ದರು. 

ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಈ ಕಟ್ಟಡ ವಾಲಿದೆ. ಒಳಗಿದ್ದವರಿಗೆ ಕಟ್ಟಡ ವಾಲುತ್ತಿರುವ ಅನುಭವ ಆಗುತ್ತಿರುವ ಸಂದರ್ಭದಲ್ಲಿ ಸದ್ದು ಕೂಡ ಕೇಳಿಸಿದೆ. ತಕ್ಷಣ ಒಳಗೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. 

ಐದು ವರ್ಷದ ಹಿಂದೆ ಕಟ್ಟಿದ್ದ ಈ ಕಟ್ಟಡದ ಸಮೀಪದಲ್ಲಿ ಹೊಸ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭವಾಗಿತ್ತು. ಅದಕ್ಕೆ ಪಾಯ ತೆಗೆದ ಪರಿಣಾಮ ಈ ಕಟ್ಟಡ ವಾಲಿದೆ. ನಿವೇಶನಕ್ಕೆ ಹೊಂದಿಕೊಂಡಿದ್ದ ಕಟ್ಟಡದ ಅಡಿಪಾಯಕ್ಕಿಂತ ಆಳವಾದ ಪಾಯ ತೋಡಿದ್ದರಿಂದ ನಿರ್ಮಾಣಗೊಂಡಿದ್ದ ಕಟ್ಟಡದ ಅಡಿಪಾಯ ಸಡಿಲವಾಗಿ‌ದೆ. ಪಕ್ಕದ ನಿವೇಶನ ಬಾಬು ಎಂಬುವರಿಗೆ ಸೇರಿದ್ದಾಗಿದ್ದು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಕಪಕ್ಕದ ಕಟ್ಟಡಗಳಿಗೆ ಯಾವುದೇ ಹಾನಿ ಉಂಟಾಗದಂತೆ ವಾಲಿದ ಕಟ್ಟಡವನ್ನು ನೆಲಸಮ ಮಾಡಲು ಬಿಬಿಎಂಪಿ ಅಧಿಕಾರಿಗಳು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ

ವಿದ್ಯಾರ್ಥಿಗಳನ್ನು ಪಕ್ಕದ ದುರ್ಗಾ ಪಿ.ಜಿಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆ. ‘ಹರ್ಷಿತ್’ ಪಿ.ಜಿ ನಡೆಸುತ್ತಿದ್ದ ತುಳಸಿ ಅವರೇ ದುರ್ಗಾ ಪಿ.ಜಿಯನ್ನೂ ನಡೆಸುತ್ತಿದ್ದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT