ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ವ್ಯಕ್ತಿಯ ಬರ್ಬರ ಕೊಲೆ, ಕುರಿಗಾಗಿಯೇ ನಡೆಯಿತಾ ಕೊಲೆ?

ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ

ಚಾಮರಾಜನಗರ: ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಾದೇವಗೌಡ(53) ಮೃತ ದುರ್ದೈವಿ. ದುಷ್ಕರ್ಮಿಗಳು ಕುತ್ತಿಗೆ ಬಿಗಿದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಮೃತರು ತೋಟದ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದು, 100 ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದರು ಎಂದು ತಿಳಿದುಬಂದಿದೆ.

ಇನ್ನು, ನಿನ್ನೆ ಸಂಜೆ ಕುರಿಗಳು ಮನೆಗೆ ವಾಪಸ್​ ಆದರೂ ಮಹಾದೇವಗೌಡ ಮಾತ್ರ ಬಂದಿರಲಿಲ್ಲ. ಆದ್ದರಿಂದ ಇಂದು ಬೆಳಗ್ಗೆ ಹುಡುಕಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು, ಕುರಿಗಾಹಿ ಬಳಿಯಿದ್ದ 10 ಸಾವಿರಕ್ಕೂ ಹೆಚ್ಚು ನಗದು, 6-7 ಕುರಿ ಹಾಗೂ ಧರಿಸಿದ್ದ ಉಂಗುರ ಇಲ್ಲ ಎಂದು ಮೃತನ ಪತ್ನಿ ತಿಳಿಸಿದ್ದಾರೆ. ಹೀಗಾಗಿ ದುಷ್ಕರ್ಮಿಗಳು ಕೊಲೆ ಮಾಡಿ, ಕುರಿ, ಹಣ ಕದ್ದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಸಂತೇಮರಹಳ್ಳಿ ಹಾಗೂ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕುರಿಗಾಹಿಯನ್ನು ಬರ್ಬರವಾಗಿ ಕೊಂದಿರುವ ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT