ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ವ್ಯಕ್ತಿಯ ಬರ್ಬರ ಕೊಲೆ, ಕುರಿಗಾಗಿಯೇ ನಡೆಯಿತಾ ಕೊಲೆ?

ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ

ಚಾಮರಾಜನಗರ: ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಾದೇವಗೌಡ(53) ಮೃತ ದುರ್ದೈವಿ. ದುಷ್ಕರ್ಮಿಗಳು ಕುತ್ತಿಗೆ ಬಿಗಿದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಮೃತರು ತೋಟದ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದು, 100 ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದರು ಎಂದು ತಿಳಿದುಬಂದಿದೆ.

ಇನ್ನು, ನಿನ್ನೆ ಸಂಜೆ ಕುರಿಗಳು ಮನೆಗೆ ವಾಪಸ್​ ಆದರೂ ಮಹಾದೇವಗೌಡ ಮಾತ್ರ ಬಂದಿರಲಿಲ್ಲ. ಆದ್ದರಿಂದ ಇಂದು ಬೆಳಗ್ಗೆ ಹುಡುಕಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು, ಕುರಿಗಾಹಿ ಬಳಿಯಿದ್ದ 10 ಸಾವಿರಕ್ಕೂ ಹೆಚ್ಚು ನಗದು, 6-7 ಕುರಿ ಹಾಗೂ ಧರಿಸಿದ್ದ ಉಂಗುರ ಇಲ್ಲ ಎಂದು ಮೃತನ ಪತ್ನಿ ತಿಳಿಸಿದ್ದಾರೆ. ಹೀಗಾಗಿ ದುಷ್ಕರ್ಮಿಗಳು ಕೊಲೆ ಮಾಡಿ, ಕುರಿ, ಹಣ ಕದ್ದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಸಂತೇಮರಹಳ್ಳಿ ಹಾಗೂ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕುರಿಗಾಹಿಯನ್ನು ಬರ್ಬರವಾಗಿ ಕೊಂದಿರುವ ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ!

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ, ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು

'ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..': ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ, Video Viral

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪಿಸಿದ್ದಕ್ಕೆ KDP ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ Congress MLC, Video Viral!

SCROLL FOR NEXT