ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ವ್ಯಕ್ತಿಯ ಬರ್ಬರ ಕೊಲೆ, ಕುರಿಗಾಗಿಯೇ ನಡೆಯಿತಾ ಕೊಲೆ?

ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ

ಚಾಮರಾಜನಗರ: ಕುರಿಗಾಹಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮಂಗಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಾದೇವಗೌಡ(53) ಮೃತ ದುರ್ದೈವಿ. ದುಷ್ಕರ್ಮಿಗಳು ಕುತ್ತಿಗೆ ಬಿಗಿದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಮೃತರು ತೋಟದ ಮನೆಯಲ್ಲಿ ಪತ್ನಿಯೊಂದಿಗೆ ವಾಸವಿದ್ದು, 100 ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದರು ಎಂದು ತಿಳಿದುಬಂದಿದೆ.

ಇನ್ನು, ನಿನ್ನೆ ಸಂಜೆ ಕುರಿಗಳು ಮನೆಗೆ ವಾಪಸ್​ ಆದರೂ ಮಹಾದೇವಗೌಡ ಮಾತ್ರ ಬಂದಿರಲಿಲ್ಲ. ಆದ್ದರಿಂದ ಇಂದು ಬೆಳಗ್ಗೆ ಹುಡುಕಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು, ಕುರಿಗಾಹಿ ಬಳಿಯಿದ್ದ 10 ಸಾವಿರಕ್ಕೂ ಹೆಚ್ಚು ನಗದು, 6-7 ಕುರಿ ಹಾಗೂ ಧರಿಸಿದ್ದ ಉಂಗುರ ಇಲ್ಲ ಎಂದು ಮೃತನ ಪತ್ನಿ ತಿಳಿಸಿದ್ದಾರೆ. ಹೀಗಾಗಿ ದುಷ್ಕರ್ಮಿಗಳು ಕೊಲೆ ಮಾಡಿ, ಕುರಿ, ಹಣ ಕದ್ದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಸಂತೇಮರಹಳ್ಳಿ ಹಾಗೂ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕುರಿಗಾಹಿಯನ್ನು ಬರ್ಬರವಾಗಿ ಕೊಂದಿರುವ ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT