ರಾಜ್ಯ

6 ನಿರ್ಣಯಗಳೊಂದಿಗೆ ಕಲಬುರಗಿ ನುಡಿಜಾತ್ರೆಗೆ ಅದ್ದೂರಿ ತೆರೆ

ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.

ಕಲಬುರಗಿ: ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಲಲಾಗಿದೆ.

ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿರುವ ನಿರ್ಣಯಗಳು ಹೀಗಿದೆ-

  • ರಾಜ್ಯದಲ್ಲಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಕಡ್ಡಾಯಗೊಳಿಸಬೇಕು.
  • ಕಲ್ಯಾಣ ಕರ್ನಾಟಕ ಐತಿಹಾಸಿಕ ತಾಣಗಳ ಅಭಿವೃದ್ಧಿ.
  • 371(ಜೆ) ಕಲಂ ತಿದ್ದುಪಡಿಯ ಲೋಪದೋಷಗಳನ್ನು ಸರಿಪಡಿಸಬೇಕು, ಸಮರ್ಪಕ ಅನುಷ್ಠಾನ ಕ್ರಮ ಕೈಗೊಳ್ಳಬೇಕು.
  • ಮಹಾಜನ್ ವರದಿಯೆ ಅಂತಿಮ, ಅದರ ಅನುಷ್ಠಾನಕ್ಕೆ ತಂದು ವಿವಾದ ಕೊನೆಗಾಣಿಸಲು ಆಗ್ರಹ 
  • ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಗ್ರಹ.
  • ಗಡಿ ವಿಷಯದಲ್ಲಿ ಮಹಾರಾಷ್ಟ್ರದ ಉದ್ಧಟತನಕ್ಕೆ ಖಂಡನೆ.

86 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನವಾಗಿದ್ದು ಇದೇ ವರ್ಷಾಂತ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಸಮ್ಮೇಳನ ಆಯೋಜಿಸಲು ನಿನ್ನೆ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT