ಈಶ್ವರ ಖಂಡ್ರೆ 
ರಾಜ್ಯ

ಶಾಹೀನ್ ಶಾಲಾ ಪ್ರಕರಣ ಹಿಂಪಡೆದು ಬಂಧಿತರನ್ನು ರಿಲೀಸ್ ಮಾಡಿ- ಯಡಿಯೂರಪ್ಪಗೆ ಈಶ್ವರ್ ಖಂಡ್ರೆ ಪತ್ರ

ಬೀದರ್ ಶಾಹೀನ್    ಶಾಲಾ ಪ್ರಕರಣ ಹಿಂಪಡೆದು ಬಂಧಿತರನ್ನು ಬಿಡುಗಡೆಗೊಳಿಸುವಂತೆ ಹಾಗೂ 2019-20ರ ಬಜೆಟ್‌ನಲ್ಲಿ ಬೀದರ್‌ ಅಭಿವೃದ್ಧಿಗೆ ಘೋಷಿಸಲಾಗಿದ್ದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ. 

ಬೆಂಗಳೂರು: ಬೀದರ್ ಶಾಹೀನ್    ಶಾಲಾ ಪ್ರಕರಣ ಹಿಂಪಡೆದು ಬಂಧಿತರನ್ನು ಬಿಡುಗಡೆಗೊಳಿಸುವಂತೆ ಹಾಗೂ 2019-20ರ ಬಜೆಟ್‌ನಲ್ಲಿ ಬೀದರ್‌ ಅಭಿವೃದ್ಧಿಗೆ ಘೋಷಿಸಲಾಗಿದ್ದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ಹಿಂದುಳಿದ ಬೀದರ್ ಜಿಲ್ಲೆಯಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆ ಕಳೆದ ಹತ್ತಾರು ವರ್ಷದಿಂದ ಜಿಲ್ಲೆಯಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಜ.21 ರಂದು ನಾಟಕದಲ್ಲಿ ಮೋದಿ ಅವರನ್ನು ವಿದ್ಯಾರ್ಥಿಗಳು ನಿಂದಿಸಿದ್ದನ್ನೂ ಸಮರ್ಥಿಸುತ್ತಿಲ್ಲವಾದರೂ ಗುಬ್ಬಿಯ ಮೇಲೆ ಬ್ರಾಹ್ಮಾಸ್ತ್ರ ಎನ್ನುವಂತೆ ಶಾಲೆಯ ಮುಖ್ಯಶಿಕ್ಷಕಿ ಹಾಗೂ ವಿದ್ಯಾರ್ಥಿನಿ ತಾಯಿಯನ್ನು ಬಂಧಿಸಿರುವುದು ಸರಿಯಲ್ಲ ಎಂಧರು.

ಅವರ ಮೇಲೆ ದುರುದ್ದೇಶಪೂರಕ ದಾಖಲಿಸಿರುವ ದೇಶದ್ರೋಹ ಕೇಸ್ ವಾಪಸ್ ಪಡೆಯಬೇಕು.ತನಿಖಾಧಿಕಾರಿಗಳು ಸ್ಕೂಲ್ ಗೆ ಹೋಗಿ ತನಿಖೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳು ಭಯ ಭೀತಿಗೊಂಡಿದ್ದಾರೆ.ಪ್ರಕರಣ ಹಿಂಪಡೆದು ಶಿಕ್ಷಕಿ ಮತ್ತು ವಿದ್ಯಾರ್ಥಿನಿ ತಾಯಿಯನ್ನು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಖಂಡ್ರೆ ಒತ್ತಾಯಿಸಿದ್ದಾರೆ.

2019-20ನೇ ಸಾಲಿನ ಬಜೆಟ್ ವಿಶೇಷ ಪ್ಯಾಕೆಜ್ ಅಡಿ ಬೀದರ್ ಅಭಿವೃದ್ಧಿಗೆ 300ಕೋಟಿ ರೂ.ಮಂಜೂರಾಗಿತ್ತು.ಬರಗಾಲದಿಂದ ಜಿಲ್ಲೆಯಲ್ಲಿ ನೀರಿನ ತೊಂದರೆ ತಲೆದೋರಿದ್ದು ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT