ಸಾಂದರ್ಭಿಕ ಚಿತ್ರ 
ರಾಜ್ಯ

ಸಾಗರದಲ್ಲಿ ಗಂಧದ ದಾಸ್ತಾನಿಗೆ ಕನ್ನ; ಭದ್ರತಾ ಸಿಬ್ಬಂದಿ ಹತ್ಯೆ

ಸಾಗರದ ಅರಣ್ಯ ಇಲಾಖೆಯ ದಾಸ್ತಾನು ಕೇಂದ್ರದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ದರೋಡೆಕೋರರು ಗಂಧದ ಕೊರಡುಗಳನ್ನು ಹೊತ್ತೊಯ್ದಿದ್ದಾರೆ. 

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆಯ ದಾಸ್ತಾನು ಕೇಂದ್ರದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ದರೋಡೆಕೋರರು ಗಂಧದ ಕೊರಡುಗಳನ್ನು ಹೊತ್ತೊಯ್ದಿದ್ದಾರೆ. 

ಭದ್ರತಾ ಸಿಬ್ಬಂದಿಯನ್ನು ಸಮೀಪದ ಬಾಳೆಗುಂಡಿ ಗ್ರಾಮದ ನಿವಾಸಿ ನಾಗರಾಜ್ (47) ಎಂದು ಗುರುತಿಸಲಾಗಿದೆ. ದಾಸ್ತಾನಿನ ಮುಂಬಾಗಿಲ ಬೀಗ ಒಡೆದಿದ್ದು ಒಳಪ್ರವೇಶಿಸಿರುವ ದುಷ್ಕರ್ಮಿಗಳು ವಿದ್ಯುತ್ ಬಲ್ಬ್ ಹಾಗೂ ಸಿಸಿಟಿವಿ ಕ್ಯಾಮೆರಾಗಳಿಗೂ ಹಾನಿಯುಂಟು ಮಾಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕೆಲ ಗಂಧದ ಕೊರಡುಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 
ಆರಂಭದಲ್ಲಿ ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿರುವುದನ್ನು ತಿಳಿದ ಪೊಲೀಸರು ಆತನ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ನಂತರ ಸಾಗರ ಪಟ್ಟಣದ ಹೊರವಲಯದ ನೆಡರವಳ್ಳಿ ಬಳಿ ಆತನ ಮೃತದೇಹ ಪತ್ತೆಯಾಗಿತ್ತು. ನಾಗರಾಜ್ ದರೋಡೆಕೋರರನ್ನು ತಡೆಯಲು ಯತ್ನಿಸಿದಾಗ ಆತನ ಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯಲ್ಲಿ ಎಷ್ಟು ಗಂಧದ ಕೊರಡು ಕಾಣೆಯಾಗಿದೆ ಎಂಬುದು ಇನ್ನೂ ಖಚಿತಗೊಂಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ಬೆಂಗಳೂರಿನಿಂದ ತುಮಕೂರಿಗೆ Namma Metro ಯೋಜನೆ ವಿಸ್ತರಣೆಗೆ BJP ಸಂಸದ ತೇಜಸ್ವಿ ಸೂರ್ಯ ಆಕ್ಷೇಪ!

ಬೆಂಗಳೂರಿನಿಂದ ತುಮಕೂರಿಗೆ Namma Metro: ಡಿಪಿಆರ್‌ ಟೆಂಡರ್‌ ಆಹ್ವಾನಿಸಿದ BMRCL; 20 ಸಾವಿರ ಕೋಟಿ ರೂ ವೆಚ್ಚ; ಎಲ್ಲೆಲ್ಲಿ ನಿಲ್ದಾಣ?

Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ

SCROLL FOR NEXT