ಸಾಂದರ್ಭಿಕ ಚಿತ್ರ 
ರಾಜ್ಯ

ಸಾಗರದಲ್ಲಿ ಗಂಧದ ದಾಸ್ತಾನಿಗೆ ಕನ್ನ; ಭದ್ರತಾ ಸಿಬ್ಬಂದಿ ಹತ್ಯೆ

ಸಾಗರದ ಅರಣ್ಯ ಇಲಾಖೆಯ ದಾಸ್ತಾನು ಕೇಂದ್ರದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ದರೋಡೆಕೋರರು ಗಂಧದ ಕೊರಡುಗಳನ್ನು ಹೊತ್ತೊಯ್ದಿದ್ದಾರೆ. 

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆಯ ದಾಸ್ತಾನು ಕೇಂದ್ರದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ದರೋಡೆಕೋರರು ಗಂಧದ ಕೊರಡುಗಳನ್ನು ಹೊತ್ತೊಯ್ದಿದ್ದಾರೆ. 

ಭದ್ರತಾ ಸಿಬ್ಬಂದಿಯನ್ನು ಸಮೀಪದ ಬಾಳೆಗುಂಡಿ ಗ್ರಾಮದ ನಿವಾಸಿ ನಾಗರಾಜ್ (47) ಎಂದು ಗುರುತಿಸಲಾಗಿದೆ. ದಾಸ್ತಾನಿನ ಮುಂಬಾಗಿಲ ಬೀಗ ಒಡೆದಿದ್ದು ಒಳಪ್ರವೇಶಿಸಿರುವ ದುಷ್ಕರ್ಮಿಗಳು ವಿದ್ಯುತ್ ಬಲ್ಬ್ ಹಾಗೂ ಸಿಸಿಟಿವಿ ಕ್ಯಾಮೆರಾಗಳಿಗೂ ಹಾನಿಯುಂಟು ಮಾಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕೆಲ ಗಂಧದ ಕೊರಡುಗಳು ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 
ಆರಂಭದಲ್ಲಿ ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದು, ಆತನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿರುವುದನ್ನು ತಿಳಿದ ಪೊಲೀಸರು ಆತನ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ನಂತರ ಸಾಗರ ಪಟ್ಟಣದ ಹೊರವಲಯದ ನೆಡರವಳ್ಳಿ ಬಳಿ ಆತನ ಮೃತದೇಹ ಪತ್ತೆಯಾಗಿತ್ತು. ನಾಗರಾಜ್ ದರೋಡೆಕೋರರನ್ನು ತಡೆಯಲು ಯತ್ನಿಸಿದಾಗ ಆತನ ಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯಲ್ಲಿ ಎಷ್ಟು ಗಂಧದ ಕೊರಡು ಕಾಣೆಯಾಗಿದೆ ಎಂಬುದು ಇನ್ನೂ ಖಚಿತಗೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi, UAE Boardಗೆ ಭಾರತದ ಟ್ರೋಫಿ ಹಸ್ತಾಂತರ: ವರದಿ

SCROLL FOR NEXT