ಸಂಗ್ರಹ ಚಿತ್ರ 
ರಾಜ್ಯ

ನೌಕರಿಗೆ ಚಕ್ಕರ್ ಹೊಡೆಯುವುದಕ್ಕೂ ಮುನ್ನ ಎಚ್ಚರ: ವಿಧಾನಸೌಧದಲ್ಲಿ ನೌಕರರ ಚಲನವಲನದ ಮೇಲೆ ಸರ್ಕಾರ ನಿಗಾ

ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಕಚೇರಿ ವೇಳೆಯಲ್ಲಿ ಅನಗತ್ಯ ಹೊರಗಡೆ ಕಾಲಹರಣ ಮಾಡುವುದು, ವೈಯಕ್ತಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಬೆಂಗಳೂರು: ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಕಚೇರಿ ವೇಳೆಯಲ್ಲಿ ಅನಗತ್ಯ ಹೊರಗಡೆ ಕಾಲಹರಣ ಮಾಡುವುದು, ವೈಯಕ್ತಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸಚಿವಾಲಯದ ಸಿಬ್ಬಂದಿ ಕಚೇರಿ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಹೋಗುವಂತಿಲ್ಲ. ಕಚೇರಿ ಸಮಯ ತಮ್ಮ ಸ್ಥಾನದಲ್ಲಿಯೇ ಕುಳಿತು ಕಾರ್ಯನಿರ್ವಹಿಸಬೇಕು. ಸಿಬ್ಬಂದಿಯಲ್ಲಿ ಶಿಸ್ತು ಹಾಗೂ ಸಮಯ ಪ್ರಜ್ಞೆ ಮೂಡಿಸಲು ಸಿಬ್ಬಂದಿಯ ಚಲನವಲನಗಳ ಬಗ್ಗೆ ನಿಗಾವಹಿಸಲು ಚಲನವಲನ ವಹಿ ನಿರ್ವಹಣೆ ಮಾಡಬೇಕು. ಒಂದು ವೇಳೆ ಹೊರಗಡೆ ಹೋಗಬೇಕಾದರೆ ಹಿರಿಯ ಅಧಿಕಾರಿಯ ಅನುಮತಿ ಪಡೆದು, ಹೊರಗೆ ಹೋಗುತ್ತಿರುವ ಕಾರಣ ಮತ್ತು ವಾಪಸು ಬಂದ ಸಮಯನ್ನು ಸಹಿಯ ಸಮೇತ ಬರೆಯಬೇಕು ಎಂದು ಸಿಬ್ಬಂದಿ-ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. 

ಕಚೇರಿ ಅವಧಿಯಲ್ಲಿ ಅಧಿಕಾರಿಗಳು ಮತ್ತು ನೌಕರರು ವೈಯಕ್ತಿಕ ಕೆಲಸ, ಅನ್ಯ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ. ವಿಜಯಭಾಸ್ಕರ್ ಇದಕ್ಕೆ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಹೀಗಾಗಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಕಚೇರಿ ವೇಳೆಯಲ್ಲಿ ವೈಯಕ್ತಿಕ ಕೆಲಸ, ಕ್ಯಾಂಟೀನ್ ಇತ್ಯಾದಿ ಕಾರಣಗಳನ್ನು ನೀಡಿ ಹೊರಗೆ ಹೋಗುವಂತಿಲ್ಲ. ಈ ಬಗ್ಗೆ ನಿಗಾವಹಿಸಲು ಪ್ರತಿಯೊಂದು ಶಾಖೆಯಲ್ಲಿಯೂ ಒಂದು ಚಲನವಲನ ವಹಿ ನಿರ್ವಹಿಸಬೇಕು. ಹೊರಗೆ ಹೋಗುವವರು ಅನುಮತಿ ಪಡೆಯದೆ, ಕಾರಣ ನಮೂದಿಸದೆ ಹೋಗಿದ್ದರೆ ಅನಧಿಕೃತ ಗೈರು ಎಂದು ಪರಿಗಣಿಸಿ ಉನ್ನತ ಅಧಿಕಾರಿಗಳು ಕ್ರಮಕೈಗೊಳ್ಳಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT