ಬೆಂಗಳೂರಿನ ಜಯದೇವ ಆಸ್ಪತ್ರೆ 
ರಾಜ್ಯ

ಬೆಂಗಳೂರು: ಹಸುಗೂಸಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಜಯದೇವ ವೈದ್ಯರ ತಂಡ

ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ತಂದ ನಲ್ವತ್ತು ದಿನಗಳ ಹಸುಗೂಸು ಸೈಫುಲ್ ಅಝ್ಮಾನ್‌ನ ತೆರೆದ ಹೃದಯದ ಶಸ್ತ್ರ  ಚಿಕಿತ್ಸೆ ಮಾಡುವಲ್ಲಿ ನಗರದ ಜಯದೇವ ಆಸ್ಪತ್ರೆಯ ವೈದ್ಯರ ತಂಡ  ಯಶಸ್ವಿಯಾಗಿದೆ.

ಬೆಂಗಳೂರು: ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ತಂದ ನಲ್ವತ್ತು ದಿನಗಳ ಹಸುಗೂಸು ಸೈಫುಲ್ ಅಝ್ಮಾನ್‌ನ ತೆರೆದ ಹೃದಯದ ಶಸ್ತ್ರ  ಚಿಕಿತ್ಸೆ ಮಾಡುವಲ್ಲಿ ನಗರದ ಜಯದೇವ ಆಸ್ಪತ್ರೆಯ ವೈದ್ಯರ ತಂಡ  ಯಶಸ್ವಿಯಾಗಿದೆ.

ಗುರುವಾರ ಸೈಫುಲ್‌ನನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಶೂನ್ಯ ಸಂಚಾರ(ಝೀರೋ ಟ್ರಾಫಿಕ್)ವ್ಯವಸ್ಥೆಯಲ್ಲಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿತ್ತು. ಚಾಲಕ ಹನೀಫ್ ಅವರು ಮಂಗಳೂರಿನಿಂದ  ಅಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ 4ಗಂಟೆ 32ನಿಮಿಷದಲ್ಲಿ ಬೆಂಗಳೂರಿಗೆ ತಲುಪಿಸಿದ್ದರು.

ಜಯದೇವ ಆಸ್ಪತ್ರೆಯ ಡಾ.ಜಯಂತ್ ಕುಮಾರ್ ನೇತೃತ್ವದಲ್ಲಿ ಡಾ.ಆನಂದ್, ಡಾ.ಜಯಂತ್ ಸೇರಿದಂತೆ ಒಟ್ಟು 12 ವೈದ್ಯರ ತಂಡ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, ಇನ್ನೂ ನಾಲ್ಕೈದು ದಿನ ಮಗುವಿಗೆ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ಚಿಕಿತ್ಸೆಗೆ 2.5 ಲಕ್ಷ ರೂ. ಖರ್ಚಾಗಿದ್ದು, 1 ಲಕ್ಷ ರೂ. ಬಿಪಿಎಲ್ ಕಾರ್ಡಿನಿಂದ ಭರಿಸಲಾಗುವುದು. ಉಳಿದ ಹಣವನ್ನು ಜಯದೇವ ಆಸ್ಪತ್ರೆಯೇ ನೋಡಿಕೊಳ್ಳಲಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನೆಯ ನಿರ್ದೇಶಕ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ