ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ವಲಸಿಗರ ನಿಯಂತ್ರಕ್ಕೆ ಕಾನೂನು ಜಾರಿಗೆ ತನ್ನಿ: ಕನ್ನಡಪರ ಸಂಘಟನೆಗಳು 
ರಾಜ್ಯ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ವಲಸಿಗರ ನಿಯಂತ್ರಕ್ಕೆ ಕಾನೂನು ಜಾರಿಗೆ ತನ್ನಿ: ಕನ್ನಡಪರ ಸಂಘಟನೆಗಳು

ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ರಾಷ್ಟ್ರವ್ಯಾಪ್ತಿ ಅಂತರರಾಜ್ಯ ವಲಸೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. 

ಬೆಂಗಳೂರು: ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ರಾಷ್ಟ್ರವ್ಯಾಪ್ತಿ ಅಂತರರಾಜ್ಯ ವಲಸೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ. 

ನಗರದ ಟೌನ್ ಹಾಲ್ ಬಳಿ ಹಲವು ಕನ್ನಡಪರ ಸಂಘಟನೆಗಳು, ಕರ್ನಾಟಕ ಕೇಂದ್ರೀಯ ರಾಜಕಾರಣ ಪ್ರತಿಭಟನೆ ನಡೆಸಿದ್ದು, ಖಾಸಗಿ ಹಾಗೂ ಸರ್ಕಾರಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ರಾಷ್ಟ್ರವ್ಯಾಪ್ತಿ ಅಂತರರಾಜ್ಯ ವಲಸೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿ ಮಾಡುವಂತೆ ಆಗ್ರಹಿಸಿದ್ದಾರೆ. 

ತಮಿಳುನಾಡು, ಆಂಧ್ರಪ್ರದೇಶ ಹಾಗೂ ಇತರೆ ರಾಜ್ಯಗಳಿಂದ ಬರುವವರು ನಮ್ಮ ಕೆಲಸಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಶಾಸಕರ ಹಾಗೂ ಕಾರ್ಪೊರೇಟ್ ಸ್ಥಾನಗಳನ್ನೂ ಕಸಿದುಕೊಳ್ಳುತ್ತಿದ್ದಾರೆ. ವಲಸಿಗರ ತಡೆಯಲು ಕೇಂದ್ರ ಸರ್ಕಾರದಿಂದ ಕಾನೂನು ಜಾರಿಯಾಗಬೇಕಿದೆ ಎಂದು ರಾಷ್ಟ್ರೀಯ ಕಾರ್ಮಿಕ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಮೋಹನ್ ರಾಜ್ ಒಡೆಯರ್ ಅವರು ಹೇಳಿದ್ದಾರೆ. 

ಕನ್ನಡ ನೆಲದಲ್ಲಿ ಕನ್ನಡಿಗರಿಗೆ ಪ್ರಾಮುಖ್ಯತೆ ನೀಡಬೇಕು. ಪ್ರಸ್ತುತ ಇರುವ ಪರಿಸ್ಥಿತಿ ಬೇರೆ ರಾಜ್ಯಗಳಿಂದ ಬರುವವರು ನಮ್ಮ ಕೆಲಸವನ್ನು ಕಸಿದುಕೊಳ್ಳುತ್ತಿದ್ದಾರೆ, ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಂತಹ ಪರಿಸ್ಥಿತಿ ಏರ್ಪಟ್ಟಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಕನ್ನಡಾಂಬೆ ಹಿತರಕ್ಷಣೆ ವೇದಿಕೆಯ ಅಧ್ಯಕ್ಷ ರಾಜೇಂದ್ರ ಗೌಡ ಅವರು ಹೇಳಿದ್ದಾರೆ. 

ಖಾಸಗಿ ಕಂಪನಿಗಳು ಹೊರಗಿನವರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದು, ನೇಮಕಾತಿಗೂ ಮುನ್ನ ಈ ಬಗ್ಗೆ ಸರ್ಕಾರದ ಅನುಮತಿ ಪಡೆದುಕೊಳ್ಳಬೇಕೆಂಬ ನಿಯಮವನ್ನು ಜಾರಿಗೆ ತರಬೇಕೆಂದು ಇದೇ ವೇಳೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT