ಸಂಗ್ರಹ ಚಿತ್ರ 
ರಾಜ್ಯ

ಅನೈತಿಕ ಸಂಬಂಧ ಶಂಕೆ: ಪತಿ ಮೇಲೆ ಕುದಿಯುವ ಎಣ್ಣೆ ಸುರಿದ ಪತ್ನಿ

ಅನೈತಿಕ ಸಂಬಂಧ ಹೊಂದಿದ್ದಾರೆಂದು ಶಂಕಿಸಿದ ಪತ್ನಿಯೊಬ್ಬಳು ಪತಿ ಮೇಲೆ ಕುದಿಯುತ್ತಿರುವ ಎಣ್ಣೆಯನ್ನು ಸುರಿದಿರುವ ಘಟನೆಯೊಂದು ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ. 

ಬೆಂಗಳೂರು: ಅನೈತಿಕ ಸಂಬಂಧ ಹೊಂದಿದ್ದಾರೆಂದು ಶಂಕಿಸಿದ ಪತ್ನಿಯೊಬ್ಬಳು ಪತಿ ಮೇಲೆ ಕುದಿಯುತ್ತಿರುವ ಎಣ್ಣೆಯನ್ನು ಸುರಿದಿರುವ ಘಟನೆಯೊಂದು ಬೆಂಗಳೂರಿನ ಮಂಜುನಾಥ ನಗರದಲ್ಲಿ ನಡೆದಿದೆ. 

ಘಟನೆಯಲ್ಲಿ ಮಹಿಳೆಯ ಪತಿ ಮಂಜುನಾಥ್ (40) ಗಾಯಗೊಂಡಿದ್ದು, ಪ್ರಾಣಾಪಾಯದಿಂದಪಾರಾಗಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಪತ್ನಿ ಪದ್ಮ ಎಂ ಎಂಬುವವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

9 ವರ್ಷಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಫ್ಯಾಬ್ರಿಕೇಷನ್ ವ್ಯವಹಾರವನ್ನು ನಡೆಸಿದ್ದು, ಸಮಯ ಸಿಕ್ಕಾಗ ಸಂಗೀತ ಕಾರ್ಯಕ್ರಮಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 

ಪತಿ ಅನೈತಿಕ ಸಂಬಂಧ ಹೊಂದಿದ್ದಾರೆಂದು ಪದ್ಮ ಅವರು ಶಂಕಿಸಿದ್ದು, ಈ ಬಗ್ಗೆ ಆಗಾಗ ಇಬ್ಬರ ನಡುವೆ ವಾಗ್ವಾದಗಳೂ ಕೂಡ ನಡೆಯುತ್ತಿದ್ದವು. ಇದರಂತೆ ಈ ವಾಗ್ವಾದ ವಿಕೋಪಕ್ಕೆ ತೆರಳಿದ್ದು, ಭಾನುವಾರ ಬೆಳಗಿನ ಜಾವದಲ್ಲಿ ಮಲಗಿದ್ದ ತನ್ನ ಪತಿ ಮಂಜುನಾಥ್ ಅವರ ಮೇಲೆ ಪದ್ಮಾ ಕುದಿಯುತ್ತಿರುವ ಎಣ್ಣೆಯನ್ನು ಸುರಿದಿದ್ದಾರೆ. ಬಳಿಕ ತನ್ನ ಪುತ್ರನೊಂದಿಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಳಿಕ ಮಂಜುನಾಥ್ ಅವರು ಕೂಗಿಕೊಂಡು ನೆರೆಮನೆಯವರ ಸಹಾಯಕ್ಕೆ ಮೊರೆ ಇಟ್ಟಿದ್ದಾರೆ. 

ಕೂಡಲೇ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಮಂಜನಾಥ್ ಅವರ ಸ್ಥಿತಿ ಸುಧಾರಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT