ರಾಜ್ಯ

ಪ್ರತ್ಯೇಕ ಪ್ರಕರಣ: ಅನಾರೋಗ್ಯದ ಕಾರಣದಿಂದಾಗಿ ಬಾಲಕಿ ಸೇರಿ ಇಬ್ಬರು ಆತ್ಮಹತ್ಯೆ

Shilpa D

ಬೆಂಗಳೂರು: ನಗರದಲ್ಲಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಬಾಲಕಿ ಸೇರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜೆಸಿ ನಗರದ ಕುರುಬರ ಹಳ್ಳಿಯಲ್ಲಿ  ಸೋಮವಾರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಉಷಾ  (13) ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಈಕೆ 7ನೇ ತರಗತಿ ಓದುತ್ತಿದ್ದಳು. ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದ  ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಕುರುಬರಹಳ್ಳಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಪಿಟೀಲು ವಾದಕ ವಿಶ್ವನಾಥ್ ರಾಥೋಡ್ ಅವರ ಪತ್ನಿ ವಂದನಾ (52) ನೇಣಿಗೆ ಶರಣಾಗಿದ್ದಾರೆ.

ಗರ್ಭಕೋಶ  ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ವಂದನಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಹಾಲಕ್ಷ್ಮಿ ಲೇಔಟ್  ಪೊಲೀಸರು ತಿಳಿಸಿದ್ದಾರೆ.

SCROLL FOR NEXT