ಸಂಗ್ರಹ ಚಿತ್ರ 
ರಾಜ್ಯ

ಶವಸಂಸ್ಕಾರದ ವೇಳೆ ಮೃತ ವ್ಯಕ್ತಿಯ ಆಧಾರ್ ಕಡ್ಡಾಯವಲ್ಲ: ಸಿಬ್ಬಂದಿಗೆ ಬಿಬಿಎಂಪಿ ಸೂಚನೆ

ಬಿಬಿಎಂಪಿಯ ವಿದ್ಯುತ್ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ  ಕಡ್ಡಾಯವಲ್ಲ ಎಂಬು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬೆಂಗಳೂರು: ಬಿಬಿಎಂಪಿಯ ವಿದ್ಯುತ್ ಚಿತಾಗಾರ ಹಾಗೂ ರುದ್ರಭೂಮಿಯಲ್ಲಿ ಶವಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ  ಕಡ್ಡಾಯವಲ್ಲ ಎಂಬು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಈ ಕುರಿತು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರವಿಕುಮಾರ್ ಸುರಪುರ ಸುತ್ತೋಲೆ ಹೊರಡಿಸಿದ್ದು, ಶವ ಸಂಸ್ಕಾರಕ್ಕೆ ಮೃತ ವ್ಯಕ್ತಿಯ ಆಧಾರ್ ಗುರುತಿನ ಚೀಟಿ ಕಡ್ಡಾಯವಲ್ಲ. ಪಾಲಿಕೆಯ ವಿವಿಧ ಚಿತಾಗಾರ ಹಾಗೂ ರುದ್ರ ಭೂಮಿಯಲ್ಲಿನ ಸಿಬ್ಬಂದಿ, ಮೃತ ವ್ಯಕ್ತಿಯ ಶವ ಸಂಸ್ಕಾರಕ್ಕೆ ಆಧಾರ್ ಕಾರ್ಡ್ ಕೇಳುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. 

ಆಧಾರ್ ಕಾರ್ಡ್ ಪಡೆಯುವಂತೆ ಯಾವುದೇ ಸೂಚನೆ ನೀಡಿಲ್ಲ ಸೂಚನೆ ನೀಡಿರುವ ದಾಖಲೆಗಳನ್ನು ಹೊರತುಪಡಿಸಿ, ಬೇರೆ ದಾಖಲೆಗಳನ್ನು ಕೇಳಿದರೆ ಶಿಸ್ತು ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ. 

ವ್ಯಕ್ತಿ ಮರಣ ಹೊಂದಿರುವ ಬಗ್ಗೆ ವೈದ್ಯ ಅಥವಾ ಆಸ್ಪತ್ರೆಯಿಂದ ದೃಢೀಕರಣ ಪತ್ರ, ಶವ ಸಂಸ್ಕಾರಕ್ಕೆ ತಂದಿರುವ ದೇಹವನ್ನು ಖಚಿತಪಡಿಸಿಕೊಳ್ಳುವುದಕ್ಕೆ ಮೃತ ವ್ಯಕ್ತಿಯ ಭಾವಚಿತ್ರ ಹೊಂದಿರುವ ಯಾವುದಾದರೂ ಗುರುತಿನ ಚೀಟಿ, ಸೂಕ್ತ ದಾಖಲೆ ಇಲ್ಲದ ಸಂದರ್ಭದಲ್ಲಿ ಪಾರ್ಥೀವ ಶರೀರದೊಂದಿಗೆ ಬರುವ ನಿಕಟವರ್ತಿಯಿಂದ, ವೈದ್ಯರಿಂದ ಅಥವಾ ಆಸ್ಪತ್ರೆಯಿಂದ ಶವ ಸಂಸ್ಕಾರಕ್ಕೆ ತಂದಿರುವ ಮೃತದೇಹದ ಬಗ್ಗೆ ಸ್ವಯಂ ಮುಚ್ಚಳಿಕೆ ಪತ್ರ ಹಾಗೂ ಯಾವುದಾದರೂ ಗುರಿತಿನ ಚೀಟಿ ಪಡೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT