ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಬಂದ್: ರಸ್ತೆಗೆ ಇಳಿಯಲ್ಲ ಟ್ಯಾಕಿ, ಆಟೋ, ಖಾಸಗಿ ಬಸ್, ಏನಿರುತ್ತೆ? ಏನಿರಲ್ಲ?

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರುನಾಡು ಸ್ಥಬ್ದವಾಗಲಿದೆ.

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರುನಾಡು ಸ್ಥಬ್ದವಾಗಲಿದೆ.

ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನಿಸಿವೆ. ಆದರೆ ಟೌನ್ ಹಾಲ್ ನಲ್ಲಿ ಪ್ರತಿಭಟನೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಪ್ರತಿಭಟನೆ ಜಾಥ ನಡೆಯಲಿದೆ.

ನಾಳೆ ಏನಿರುತ್ತೆ?
* ಆಸ್ಪತ್ರೆ, ಮೆಡಿಕಲ್ ಶಾಪ್, ಹಾಲು, ಪೇಪರ್
* ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸೇವೆ ಇರುತ್ತೆ(ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸ್ಧಗಿತ ಸಾಧ್ಯತೆ)
* ನಮ್ಮ ಮೆಟ್ರೋ ರೈಲು ಸೇವೆ
* ಸರ್ಕಾರಿ ಮತ್ತು ಖಾಸಗಿ ಶಾಲೆ, ಕಾಲೇಜು(ಪರಿಸ್ಥಿತಿ ನೋಡಿ ತೀರ್ಮಾನ)
* ಬ್ಯಾಂಕ್, ಹೋಟೆಲ್, ಶಾಪಿಂಗ್ ಮಾಲ್
* ಎಪಿಎಂಸಿ, ಲಾರಿ ಸಂಚಾರ
* ಸಿನಿಮಾ ಥಿಯೇಟರ್, ಸಿನಿಮಾ ಶೂಟಿಂಗ್
* ಸರ್ಕಾರಿ ಕಚೇರಿಗಳು

ಏನಿರಲ್ಲ?
* ಸರ್ಕಾರಿ ಕಾರು ಓಡಿಸುವ ಚಾಲಕರು ಬಂದ್ ಗೆ ಬೆಂಬಲ
* ಎರಡು ಲಕ್ಷ ಆಟೋಗಳು ರಸ್ತೆಗೆ ಇಳಿಯುವುದಿಲ್ಲ
* ಒಂದೂವರೆ ಲಕ್ಷ ಓಲಾ, ಊಬರ್ ಟ್ಯಾಕ್ಸಿ ಸಂಚಾರ ಬಂದ್
* 25 ಸಾವಿರ ಮ್ಯಾಕ್ಸಿಕ್ಯಾಬ್, 10 ಸಾವಿರ ಏರ್ ಪೋರ್ಟ್ ಟ್ಯಾಕ್ಸಿ ಬಂದ್
* ಕೆಎಸ್ಟಿಡಿಸಿ, ಮೇರು, ಮೆಗಾ ಕ್ಯಾಬ್ ಗಳಿಂದಲೂ ಬಂದ್ ಗೆ ಬೆಂಬಲ
* 9 ಸಾವಿರ ಖಾಸಗಿ ಬಸ್ ಸೇರಿ ಆರು ಲಕ್ಷ ವಾಹನ ಓಡೋದಿಲ್ಲ
* 4 ಲಕ್ಷ ಸದಸ್ಯರಿಂದ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಬೆಂಬಲ
* ಬಟ್ಟೆಯಂಗಡಿ, ಚಾಟ್ಸ್, ತರಕಾರಿ, ಹೂವು-ಹಣ್ಣು ಇರಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT