ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. 

ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. 

ಪರಿಶಿಷ್ಟ ಜಾತಿ-ಪಂಗಡದ ಹಾಸ್ಟೆಲ್ ನಲ್ಲಿ‌ ಓದುತ್ತಿದ್ದ 9ನೇ ತರಗತಿಯ ದರ್ಶನ್(13), ಶ್ರೀನಿವಾಸ್(13) ಹಾಗೂ 8ನೇ ತರಗತಿಯ ನಂದನ್(12) ಮೃತ ದುರ್ದೈವಿಗಳು.

ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ  ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು

India vs South Africa: ತವರಿನಲ್ಲಿ ಮತ್ತೊಮ್ಮೆ ಭಾರತಕ್ಕೆ ವೈಟ್‌ವಾಶ್ ಮುಖಭಂಗ: ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಬವುಮಾ ಪಡೆ!

‘ಭಾರತದ ಒಂದೇ ಜಿಲ್ಲೆಗೆ 2,20,000 H-1B ವೀಸಾ ಮಂಜೂರು’: ದೊಡ್ಡ ಪ್ರಮಾಣದ ಹಗರಣ, ಯುಎಸ್ ಅರ್ಥಶಾಸ್ತ್ರಜ್ಞ ಡಾ.ಡೇವ್ ಬ್ರಾಟ್ ಆರೋಪ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

SCROLL FOR NEXT