ಬಿಎಸ್ ಯಡಿಯೂರಪ್ಪ 
ರಾಜ್ಯ

ರೈತರೊಂದಿಗೆ ಸಿಎಂ ಯಡಿಯೂರಪ್ಪ ಬಜೆಟ್ ಪೂರ್ವ ಸಭೆ

ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸಂಬಂಧ ಗುರುವಾರ ರೈತ ಮುಖಂಡರು, ರೈತ ಸಂಘಟನೆಗಳ ನಾಯಕರೊಂದಿಗೆ ಸಭೆ ನಡೆಸಿದರು.

ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸಂಬಂಧ ಗುರುವಾರ ರೈತ ಮುಖಂಡರು, ರೈತ ಸಂಘಟನೆಗಳ ನಾಯಕರೊಂದಿಗೆ ಸಭೆ ನಡೆಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಬಿ.ಸಿ ಪಾಟೀಲ್, ಪ್ರಭು ಚೌವ್ಹಾಣ್, ರೈತ ಮುಖಂಡರು ಪಾಲ್ಗೊಂಡಿದ್ದರು. ಸಚಿವ ಬಿ‌.ಸಿ ಪಾಟೀಲ್ ರ ಪುತ್ರಿ ಸೃಷ್ಟಿ ಪಾಟೀಲ್ ಸಹ ಭಾಗಿಯಾಗಿದ್ದು ವಿಶೇಷವಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳ ರೈತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಅವರೊಂದಿಗೆ ಕೃಷಿ, ನೀರಾವರಿ ಕುರಿತು ಸುಮಾರು ಮೂರು ತಾಸು ಚರ್ಚೆ ಮಾಡಿದ್ದೇನೆ. ಸಭೆಯಲ್ಲಿ ಅವರ ಸಮಸ್ಯೆಗಳನ್ನು ಆಲಿಸಿದ್ದು, ಸಮಸ್ಯೆಗಳಿಗೆ  ಪರಿಹಾರ ರೂಪಿಸಲಾಗುವುದು. ರೈತರು ಹೇಳಿದ ಸಲಹೆಗಳನ್ನು ಬಜೆಟ್‌ನಲ್ಲಿ ಕಾರ್ಯರೂಪಕ್ಕೆ ತರುವ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸರೋಜಿನಿ ಮಹಿಷಿ ವರದಿ ಜಾರಿ ಸಂಬಂಧ ವಿಪಕ್ಷ‌ಗಳ ಜೊತೆಗೆ ಚರ್ಚೆ ನಡೆಸಿ, ಸರ್ಕಾರದ ಇತಿಮಿತಿಯಲ್ಲಿ ಕೆಲಸ ಮಾಡಲಾಗುವುದು. ಪ್ರತಿಭಟನಾ ನಿರತರ ಬೇಡಿಕೆಗಳನ್ನು ಸರ್ಕಾರ ಸಕಾರಾತ್ಮಕವಾಗಿ ಬಗೆಹರಿಸಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT