ಸಂಗ್ರಹ ಚಿತ್ರ 
ರಾಜ್ಯ

ಟ್ರಾಫಿಕ್ ಉಲ್ಲಂಘನೆ: ದಂಡವನ್ನು ಮತ್ತಷ್ಟು ಏರಿಕೆ ಮಾಡಲು ಸರ್ಕಾರ ಚಿಂತನೆ

ರಸ್ತೆ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಹೇರಲಾಗುವ ದಂಡವನ್ನು ಮತ್ತಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 

ಬೆಂಗಳೂರು: ರಸ್ತೆ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಹೇರಲಾಗುವ ದಂಡವನ್ನು ಮತ್ತಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, ರಸ್ತೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ದಂಡ ಹೇರಲು ಕೇಂದ್ರ ಸರ್ಕಾರ ಈಗಾಗಲೇ ಕಾನೂನನ್ನು ಜಾರಿಗೆ ತಂದಿದೆ. ಈ ಹಿಂದಿನ ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ನಾವು ಈಗಾಗಲೇ ಚರ್ಚೆ ನಡೆಸಿದ್ದೇವೆ. ರಾಜ್ಯದಲ್ಲೂ ಕಾನೂನು ಜಾರಿಗೆ ಚಿಂತನೆ ನಡೆಸಿದ್ದೇವೆ. ಸಂಚಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯಲಿವೆ. ದಂಡವನ್ನು ಏರಿಕೆ ಮಾಡುವ ಮೂಲಕ ಅಪಘಾತ ಹಾಗೂ ಅಪರಾಧ ಕೃತ್ಯಗಳನ್ನು ತಡೆಯುವ ಪ್ರಯ್ನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಎಲೆಕ್ಟ್ರಿಕ್ ಬಸ್ ಗಳ ಕುರಿತು ಮಾತನಾಡಿದ ಅವರು, ಈ ಬಗ್ಗೆ ಸಾಕಷ್ಟು ಕಂಪನಿಗಳು ಸರ್ಕಾರದೊಂದಿಗೆ ಚರ್ಚೆ ನಡೆಸಿವೆ. ಬಸ್ ಗಳಿಗೆ ಹೂಡಿಕೆ ಮಾಡಲು ಹಾಗೂ ಅವುಗಳ ನಿರ್ವಹಣೆಗೆ ಮಾತುಕತೆ ನಡೆಸುತ್ತಿದೆ. ಸರ್ಕಾರಕ್ಕೆ ಶೇ.40ರಷ್ಟು ಲಾಭ ನೀಡಲು ಕಂಪನಿಗಳು ಒಪ್ಪಿಕೊಂಡಿವೆ. ಈ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಿ, ಮುನ್ನಡೆಯಲಿದೆ. ಶೀಘ್ಲದಲ್ಲಿಯೇ ಕೆಎಸ್ಆರ್'ಟಿಸಿಗೆ 1,200 ಬಸ್ ಗಳ ಸೇರ್ಪಡೆಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ವಾಹನ ನೋಂದಣಿ ತೆರಿಗೆ ಕುರಿತು ಮಾತನಾಡಿದ ಅವರು, ನಮ್ಮ ಗುರಿ ರೂ.7,000 ಕೋಟಿಯಾಗಿತ್ತು. ಆದರೆ, ಈ ಬಾರಿ ರೂ.1,200ಕೋಟಿಯಷ್ಟೇ ಬಂದಿದೆ. ಅಕ್ಟೋಬರ್ ಹಾಗೂ ಡಿಸೆಂಬರ್ 2019ರಲ್ಲಿ ವಾಹನಗಳ ನೋಂದಣಿ ಸಂಖ್ಯೆ ಕಡಿಮೆಯಾಗಿವೆ. ವೋಲ್ವೇ ಬಸ್ ಗಳ ನಿರ್ವಹಣೆ ದುಬಾರಿಯಾಗಿದ್ದು, ಇದೀಗ ಸರ್ಕಾರ ಲೇಲ್ಯಾಂಡ್ ಹಾಗ ಟಾಟಾ ಬಸ್ ಗಳನ್ನು ತರಲು ನಿರ್ಧರಿಸಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT