ರಾಜ್ಯ

ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ: ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿಗೆ ಗೃಹ ಬಂಧನ 

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಕಡೆ ಸಾರ್ವಜನಿಕ ಸಾರಿಗೆ ಎಂದಿನಂತೆ ಸಂಚರಿಸುತ್ತಿವೆ. ಖಾಸಗಿ ವಾಹನಗಳು ರಸ್ತೆಗಿಳಿದಿವೆ.ಶಾಲಾ-ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ. 


ಈ ಮಧ್ಯೆ ಬಂದ್ ವೇಳೆ ಹೊರಬಂದು ಹೆಚ್ಚಿನ ಪ್ರತಿಭಟನೆ, ಗದ್ದಲ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಮನೆ ಬಿಟ್ಟು ಹೋಗದಂತೆ ಅವರಿಗೆ ದಿಗ್ಭಂದನ ವಿಧಿಸಲಾಗಿದೆ. 

ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಬೆಂಗಳೂರು ನಗರದಲ್ಲಿ ಪ್ರತಿಭಟನೆ ಮೆರವಣಿಗೆ ಸಾಧ್ಯತೆ ಹಿನ್ನೆಲೆ ಕಪ್ರವೀಣ್ ಶೆಟ್ಟಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರ ಆರ್.ಟಿ ನಗರದಲ್ಲಿ ಇರುವ ನಿವಾಸದಲ್ಲೇ ಗೃಹ ಬಂಧನಕ್ಕೆ ಒಳಪಡಿಸಲಾಗಿದೆ.


ಈ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಬಂದ್ ಬಿಸಿ ಸ್ವಲ್ಪ ಮಟ್ಟಿಗೆ ತಟ್ಟಿದೆ. ಬೆಂಗಳೂರಿನ ಮೆಜೆಸ್ಟಿಕ್, ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಕಡೆಗಳಲ್ಲಿ ವಾಹನ ಸಂಚಾರ ಸ್ಥಗಿತವಾಗಿದ್ದು, ಜನರ ಓಡಾಟ ಕಡಿಮೆಯಾಗಿದೆ. ಅಲ್ಲಲ್ಲಿ ಕನ್ನಡಪರ ಸಂಘಟನೆಗಳು ರಸ್ತೆ ತಡೆ ನಡೆಸಿರುವ ವರದಿ ಬಂದಿದೆ. 


ಒಲಾ, ಉಬರ್ ಸೇವೆಗಳನ್ನು ಇಂದು ಸಾಯಂಕಾಲ 6 ಗಂಟೆಯವರೆಗೆ ಸ್ಥಗಿತಗೊಳಿಸಿ ಬಂದ್ ಗೆ ಬೆಂಬಲ ನೀಡುತ್ತೇವೆ ಎಂದು ಒಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ತಿಳಿಸಿದ್ದಾರೆ. ಇತರ ಸಾಮಾನ್ಯ ದಿನಗಳಲ್ಲಿ 70 ಸಾವಿರಕ್ಕೂ ಹೆಚ್ಚು ಉಬರ್, ಓಲಾ ಸಂಚರಿಸುತ್ತವೆ, ಆದರೆ ಇಂದು ಅವು ರಸ್ತೆಗಿಳಿದಿಲ್ಲ. 


ಇನ್ನು ಮಂಗಳೂರಿನ ಫರಂಗಿಪೇಟೆಯಲ್ಲಿ ತಿರುಪತಿ-ಮಂಗಳೂರು ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT