ಅಪಘಾತವಾದ ಕಾರು 
ರಾಜ್ಯ

ಬಳ್ಳಾರಿ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ: ಕಾರಿನಲ್ಲಿದ್ದದ್ದು ಆರ್. ಅಶೋಕ್ ಪುತ್ರ?

ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.

ಬೆಂಗಳೂರು: ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.

KA-05 MW-0357 ಕಾರಿನ ನಂಬರ್ ಮರ್ಸಿಡಿಸ್ ಬೆಂಜ್ ಕಾರ್ ಇದಾಗಿದೆ. ಹಂಪಿ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮೋಜು ಮಸ್ತಿ ಮಾಡಿಕೊಂಡು ಸೋಮವಾರ ಬೆಂಗಳೂರಿನ ಕಡೆಗೆ ಐದು ಜನರಿದ್ದ ಬೆಂಜ್ ಕಾರು ಹೊಸಪೇಟೆಯ ಹೊರವಲಯದಲ್ಲಿ ಇರುವ ಮರಿಯಮ್ಮನಹಳ್ಳಿ ಮಾರ್ಗವಾಗಿ ಪಯಣಿಸುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ತಲೆಗೆ ಪೆಟ್ಟು ಬಿದ್ದಿದ್ದ ಅಶೋಕ್ ಅವರ ಪುತ್ರನನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ಎಫ್ ಐ ಆರ್ ನಲ್ಲಿ ಕಾರು ಚಾಲಕನ ಹೆಸರನ್ನು ರಾಹುಲ್ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. 

ಅಪಘಾತವಾದ ಕಾರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಹೆಸರಿನಲ್ಲಿದೆ. ಇದು ಆರ್ ಅಶೋಕ್ ಅವರಿಗೆ ಸೇರಿದ್ದ ಕಾರು ಎನ್ನಲಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT