ಗೌತಮ್ ಕುಮಾರ್ ಜೈನ್ 
ರಾಜ್ಯ

ರಾಜ್ಯ ಅಂಗಡಿ ಮಳಿಗೆಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ; ಮೇಯರ್ ಗೌತಮ್ ಕುಮಾರ್

ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಜಯ ಕರ್ನಾಟಕ ವತಿಯಿಂದ ಆಯೋಜಿಸಿದ್ದ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ  ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಸಂಬಂಧ ಬಿಬಿಎಂಪಿ ಆದೇಶ ಮಾಡಿದೆ.

ಆದರೂ, ಕೆಲವರು ನಿಮಯ ಉಲ್ಲಂಘನೆ ಮಾಡುತ್ತಾರೆ. ಮಹದೇವಪುರ ವಲಯದಲ್ಲಿ ಹೆಚ್ಚಾಗಿ ಈ ಪ್ರಕರಣಗಳು ಬೆಳಕಿನ ಬಂದಿದ್ದು, ಸಂಘ ಸಂಸ್ಥೆಗಳು ಜಾಗೃತಿ ಆಂದೋಲನ ಕೈಗೊಳ್ಳಬೇಕೆಂದು ತಿಳಿಸಿದರು.

ಕೊಳಗೇರಿ ಪ್ರದೇಶದಲ್ಲಿನ ಜನರ ಆರೋಗ್ಯದ ಕಾಳಜಿ ವಹಿಸುವ ಬಗ್ಗೆ ನಾವು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದ ಅವರು, ಉಳ್ಳವರು ಆರೋಗ್ಯಕ್ಕಾಗಿ ಹಣ ಖರ್ಚು ಮಾಡುತ್ತಾರೆ. ಆದರೆ ಇದರಿಂದ ಬಡವರಿಗೆ ತುಂಬಾ ತೊಂದರೆ ಆಗುತ್ತದೆ ಎಂದರು.

ಕೆಸಿ‌ ಜನರಲ್ ಆಸ್ಪತ್ರೆಯ ಮಹಿಳಾ ಆರೋಗ್ಯ ತಜ್ಞೆ ಡಾ.ಮಂಜುಳಾ ಮಾತನಾಡಿ, ಶಾರೀರಿಕ ಆರೋಗ್ಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಯಾಗಿದೆ. 

ಆದರೆ, ಅನಾರೋಗ್ಯ ಪೀಡಿತರಾಗುವವರೆಗೆ ಯಾರೂ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ ಎಂಬುದು ವಾಸ್ತವಿಕತೆಯಾಗಿದೆ ಎಂದ ಅವರು, ಜೀವನವನ್ನು ಸಂಪೂರ್ಣವಾಗಿ ಆಸ್ವಾದಿಸಲು, ಅನುಭವಿಸಲು ಆರೋಗ್ಯ ಅತೀ ಅಗತ್ಯ. ಸಂತೋಷದ ಮತ್ತು ಸುಖದ ಕೀಲಿಕೈ ಆರೋಗ್ಯವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜ್, ಜಯ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್,  ಆಯುರ್ವೇದ ತಜ್ಞ ಡಾ.ವಿ.ಗಿರೀಶ್ ಕುಮಾರ್, ಜಯ ಕರ್ನಾಟಕ ಬೆಂಗಳೂರು ಅಧ್ಯಕ್ಷ ಡಾ.ಎಂ.ಜಗದೀಶ್ ಗೌಡ  ಸೇರಿದಂತೆ ಪ್ರಮುಖರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT