ಗೌತಮ್ ಕುಮಾರ್ ಜೈನ್ 
ರಾಜ್ಯ

ರಾಜ್ಯ ಅಂಗಡಿ ಮಳಿಗೆಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ; ಮೇಯರ್ ಗೌತಮ್ ಕುಮಾರ್

ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿ ಮಳಿಗೆಗಳ ನಾಮಫಲಕಗಳನ್ನು ಕನ್ನಡದಲ್ಲಿ ಬರೆಸಲು ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಜಯ ಕರ್ನಾಟಕ ವತಿಯಿಂದ ಆಯೋಜಿಸಿದ್ದ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿ  ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಸಂಬಂಧ ಬಿಬಿಎಂಪಿ ಆದೇಶ ಮಾಡಿದೆ.

ಆದರೂ, ಕೆಲವರು ನಿಮಯ ಉಲ್ಲಂಘನೆ ಮಾಡುತ್ತಾರೆ. ಮಹದೇವಪುರ ವಲಯದಲ್ಲಿ ಹೆಚ್ಚಾಗಿ ಈ ಪ್ರಕರಣಗಳು ಬೆಳಕಿನ ಬಂದಿದ್ದು, ಸಂಘ ಸಂಸ್ಥೆಗಳು ಜಾಗೃತಿ ಆಂದೋಲನ ಕೈಗೊಳ್ಳಬೇಕೆಂದು ತಿಳಿಸಿದರು.

ಕೊಳಗೇರಿ ಪ್ರದೇಶದಲ್ಲಿನ ಜನರ ಆರೋಗ್ಯದ ಕಾಳಜಿ ವಹಿಸುವ ಬಗ್ಗೆ ನಾವು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದ ಅವರು, ಉಳ್ಳವರು ಆರೋಗ್ಯಕ್ಕಾಗಿ ಹಣ ಖರ್ಚು ಮಾಡುತ್ತಾರೆ. ಆದರೆ ಇದರಿಂದ ಬಡವರಿಗೆ ತುಂಬಾ ತೊಂದರೆ ಆಗುತ್ತದೆ ಎಂದರು.

ಕೆಸಿ‌ ಜನರಲ್ ಆಸ್ಪತ್ರೆಯ ಮಹಿಳಾ ಆರೋಗ್ಯ ತಜ್ಞೆ ಡಾ.ಮಂಜುಳಾ ಮಾತನಾಡಿ, ಶಾರೀರಿಕ ಆರೋಗ್ಯವನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಯಾಗಿದೆ. 

ಆದರೆ, ಅನಾರೋಗ್ಯ ಪೀಡಿತರಾಗುವವರೆಗೆ ಯಾರೂ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ ಎಂಬುದು ವಾಸ್ತವಿಕತೆಯಾಗಿದೆ ಎಂದ ಅವರು, ಜೀವನವನ್ನು ಸಂಪೂರ್ಣವಾಗಿ ಆಸ್ವಾದಿಸಲು, ಅನುಭವಿಸಲು ಆರೋಗ್ಯ ಅತೀ ಅಗತ್ಯ. ಸಂತೋಷದ ಮತ್ತು ಸುಖದ ಕೀಲಿಕೈ ಆರೋಗ್ಯವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜ್, ಜಯ ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್,  ಆಯುರ್ವೇದ ತಜ್ಞ ಡಾ.ವಿ.ಗಿರೀಶ್ ಕುಮಾರ್, ಜಯ ಕರ್ನಾಟಕ ಬೆಂಗಳೂರು ಅಧ್ಯಕ್ಷ ಡಾ.ಎಂ.ಜಗದೀಶ್ ಗೌಡ  ಸೇರಿದಂತೆ ಪ್ರಮುಖರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT