ಹೈಕೋರ್ಟ್ 
ರಾಜ್ಯ

ದೇಶ ದ್ರೋಹದಡಿ ಶಾಲಾ ಮಕ್ಕಳ ವಿಚಾರಣೆ: ರಾಜ್ಯ ಸರ್ಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ವಿದ್ಯಾರ್ಥಿಗಳನ್ನು ದೇಶದ್ರೋಹ ಆರೋಪದಡಿ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಬೀದರ್ ನ ಶಾಹಿನ್ ಶಿಕ್ಷಣ ಸಂಸ್ಥೆಯ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ವಿರೋಧಿಸಿ ನಾಟಕ ಪ್ರದರ್ಶಿಸಿದ್ದ ವಿದ್ಯಾರ್ಥಿಗಳನ್ನು ದೇಶದ್ರೋಹ ಆರೋಪದಡಿ ವಿಚಾರಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ದೇಶ ದ್ರೋಹದಡಿ ಶಾಲಾ ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ.

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕೆಂಬ ಆಕ್ರೋಶ ವ್ಯಕ್ತವಾಗಿತ್ತು. ಸಣ್ಣ ವಯಸ್ಸಿನ ವಿದ್ಯಾರ್ಥಿಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶಿಸಿದ್ದರು. ಈ ನಾಟಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ನಾಟಕ ಪ್ರದರ್ಶಿಸಿದ್ದ ಸಣ್ಣ ವಯಸ್ಸಿನ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದರು. ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಫೆ. ೧೯ರೊಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಸರ್ಕಾರ ಮತ್ತು ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ನಯನ ಜ್ಯೋತಿ ಮಾತನಾಡಿ, ಶಾಲೆಯ ೯ ವರ್ಷಕ್ಕಿಂತ ಕಡಿಮೆ ವಯಸ್ಸಿನಿ ಸುಮಾರು ೮೫ ಮಕ್ಕಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಮಕ್ಕಳ ಮಾನಸಿಕ ಸ್ಥಿತಿ ಮೇಲೆ ಇದು ಗಂಭೀರ ಪರಿಣಾಮ ಬೀರಿದೆ ಎಂದು ನ್ಯಾಯಪೀಠದ ಗಮನ ಸೆಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!