ದೊರೆಸ್ವಾಮಿ 
ರಾಜ್ಯ

'ಪ್ರತಿಯೊಬ್ಬ ಎಂಎಲ್ಎ ಮತ್ತು ಎಂಎಲ್ ಸಿಗಳು ತಲಾ 3 ಶಾಲೆ ದತ್ತು ಪಡೆಯಲಿ'

ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಬೆಂಗಳೂರು: ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು,  ‘ವಿಶ್ವವಿದ್ಯಾಲಯಕ್ಕೆ ಮೊದಲ ಕುಲಪತಿ ನೇಮಕ ಮಾಡುವಾಗ ಅತ್ಯಂತ ಸಮರ್ಥರನ್ನೇ ಆಯ್ಕೆ ಮಾಡಬೇಕು, ಇದರಿಂದ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಸುಭದ್ರವಾಗುತ್ತದೆ, ಉಳಿದ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡುವಾಗ ಅರ್ಹತೆಯಷ್ಟೇ ಮಾನದಂಡವಾಗಬೇಕು ಎಂದು ಹೇಳಿದ್ದಾರೆ,

ಶೋಧನಾ ಸಮಿತಿ ಅತ್ಯಂತ ಸಮರ್ಥರನ್ನು ಆಯ್ಕೆ ಮಾಡಬೇಕಿದ್ದು, ಭ್ರಷ್ಟಾಚಾರಕ್ಕೆ ಅವಕಾಶ ಕೊಡದಂತೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದ್ದೇನೆ ಎಂದರು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ ಒದಗಿಸಲಾಗಿದ್ದರೂ, ಅದನ್ನು ಖರ್ಚು ಮಾಡಿಯೇ ಇಲ್ಲ. ಸಮರ್ಥ ನಾಯಕತ್ವದ ಕೊರತೆಯಿಂದ ಇಂತಹ ತೊಂದರೆಗಳು ಉಂಟಾಗುತ್ತವೆ’ ಎಂದರು.

‘ಉದ್ಯೋಗ ಅವಕಾಶ ಇಲ್ಲದ ಕಾರಣ ಕೆಲವು ಪದವಿ ತರಗತಿಗಳು ಮುಚ್ಚುತ್ತಿವೆ. ಇದಕ್ಕಾಗಿ ಪದವಿ ಹಂತದಲ್ಲಿ ಉದ್ಯೋಗ ಅವಕಾಶದ ಒಂದು ವಿಷಯವನ್ನು ಸೇರಿಸಿಕೊಳ್ಳುವಂತಹ ಸಿಬಿಸಿಎಸ್‌ ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT