ದೊರೆಸ್ವಾಮಿ 
ರಾಜ್ಯ

'ಪ್ರತಿಯೊಬ್ಬ ಎಂಎಲ್ಎ ಮತ್ತು ಎಂಎಲ್ ಸಿಗಳು ತಲಾ 3 ಶಾಲೆ ದತ್ತು ಪಡೆಯಲಿ'

ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಬೆಂಗಳೂರು: ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು,  ‘ವಿಶ್ವವಿದ್ಯಾಲಯಕ್ಕೆ ಮೊದಲ ಕುಲಪತಿ ನೇಮಕ ಮಾಡುವಾಗ ಅತ್ಯಂತ ಸಮರ್ಥರನ್ನೇ ಆಯ್ಕೆ ಮಾಡಬೇಕು, ಇದರಿಂದ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಸುಭದ್ರವಾಗುತ್ತದೆ, ಉಳಿದ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡುವಾಗ ಅರ್ಹತೆಯಷ್ಟೇ ಮಾನದಂಡವಾಗಬೇಕು ಎಂದು ಹೇಳಿದ್ದಾರೆ,

ಶೋಧನಾ ಸಮಿತಿ ಅತ್ಯಂತ ಸಮರ್ಥರನ್ನು ಆಯ್ಕೆ ಮಾಡಬೇಕಿದ್ದು, ಭ್ರಷ್ಟಾಚಾರಕ್ಕೆ ಅವಕಾಶ ಕೊಡದಂತೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದ್ದೇನೆ ಎಂದರು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ ಒದಗಿಸಲಾಗಿದ್ದರೂ, ಅದನ್ನು ಖರ್ಚು ಮಾಡಿಯೇ ಇಲ್ಲ. ಸಮರ್ಥ ನಾಯಕತ್ವದ ಕೊರತೆಯಿಂದ ಇಂತಹ ತೊಂದರೆಗಳು ಉಂಟಾಗುತ್ತವೆ’ ಎಂದರು.

‘ಉದ್ಯೋಗ ಅವಕಾಶ ಇಲ್ಲದ ಕಾರಣ ಕೆಲವು ಪದವಿ ತರಗತಿಗಳು ಮುಚ್ಚುತ್ತಿವೆ. ಇದಕ್ಕಾಗಿ ಪದವಿ ಹಂತದಲ್ಲಿ ಉದ್ಯೋಗ ಅವಕಾಶದ ಒಂದು ವಿಷಯವನ್ನು ಸೇರಿಸಿಕೊಳ್ಳುವಂತಹ ಸಿಬಿಸಿಎಸ್‌ ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT