ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲು.! 
ರಾಜ್ಯ

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲು

ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ಯುವಕರು ಜಲ ಸಮಾಧಿ ಯಾಗಿರುವ ಘಟನೆ ಶ್ರೀರಂಗಪಟ್ಟಣದ ರೈಲ್ವೆ ನಿಲ್ದಾಣದ ಬಳಿಯ ಕಾವೇರಿ ನದಿಯಲ್ಲಿಂದು ನಡೆದಿದೆ.

ಮುಜಾಸಿಮ್ ಅಹಮದ್(18) ತೌಸೀಫ್(17)ಇಫ್ತಿಹಾರ್(18) ಮೃತ ದುರ್ದ್ಯವಿಗಳಾಗಿದ್ದು ಮೃತರೆಲ್ಲರು ಹಾಸನದ ಅರಸೀಕೆರೆ ಮೂಲದವರಾಗಿದ್ದು ಮೈಸೂರಿನ ಸಿದ್ದಿಕ್ ಮೊಹಲ್ಲಾದ ತಾರುಮುಲ್ಲಾ ಸಿದ್ದಿಕ್ ಟ್ರಸ್ಟ್ ನಲ್ಲಿ ಅರೇಬಿಕ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 

ಇಂದು ಮೀನು ಹಿಡಿಯಲು ಬಂದಿದ್ದವರು ಈಜಲು ಹೋಗಿದ್ದ ವೇಳೆ  ಮೃತ ಪಟ್ಟಿರಬಹುದೆಂದ ಪೊಲೀಸರು ಶಂಕೆವ್ಯಕ್ತಪಡಿಸಿದ್ದಾರೆ. ಮೂವರಲ್ಲಿ ಮುಜಾಸೀಮ್ ಶವ ಬೆಳಿಗ್ಗೆ ಪತ್ತೆಯಾಗಿದ್ದು ಉಳಿದ ಇಬ್ಬರ ಶವಗಳು ಮಧ್ಯಾಹ್ನದ ಬಳಿಕ ಪತ್ತೆಯಾಗಿವೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT