ರಾಷ್ಟ್ರದ್ರೋಹ ಪ್ರಕರಣ: ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ 
ರಾಜ್ಯ

ರಾಷ್ಟ್ರದ್ರೋಹ ಪ್ರಕರಣ: ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ಬಿಜೆಪಿ ಸರ್ಕಾರದಿಂದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು: ಬಿಜೆಪಿ ಸರ್ಕಾರದಿಂದ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬೀದರ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಟಕದಲ್ಲಿ ಸಿಎಎ ಹಾಗೂ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ನಕಾರಾತ್ಮಕವಾಗಿ ತೋರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣ ಹಾಗೂ ಪೋಷಕರೊಬ್ಬರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಫೆ.15 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿತ್ತು.

ಪ್ರತಿಭಟನೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಬ್ಯಾರಿಕೇಡ್ ದಾಟಿ ಸಿಎಂ ಗೃಹ ಕಚೇರಿಯತ್ತ ಹೋಗಲು ಯತ್ನಿಸಿದರು. ಆದರೆ ಮಧ್ಯದಲ್ಲೇ ಅವರನ್ನು ತಡೆಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯನ್ನು ವಿರೋಧಿಸುವವರು ಹಾಗೂ ಅದರ ವಿಭಜನಕಾರಿ ನೀತಿಗಳನ್ನು ವಿರೋಧಿಸುವವರ ವಿರುದ್ಧ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ದೇಶದ್ರೋಹ ಪ್ರಕರಾಣಗಳನ್ನು ದಾಖಲಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಸಿದ್ದರಾಮಯ್ಯ ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT