ಗೋವಿಂದ ಕಾರಜೋಳ 
ರಾಜ್ಯ

ಶರಣರ ಆಶಯವಾಗಿದ್ದ ಸಮಾನತೆ ಇನ್ನೂ ಸಾಕಾರಗೊಂಡಿಲ್ಲ; ಗೋವಿಂದ ಕಾರಜೋಳ

ವಿಶ್ವ ಗುರು ಬಸವಣ್ಣ ಹಾಗೂ ಅವರ ಸಮಕಾಲೀನ ಶರಣರು 900 ವರ್ಷಗಳ ಹಿಂದೆ ಸಾಮಾಜಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದ್ದರೂ‌ ಅಸಮಾನತೆ ಇನ್ನೂ ಅಳಿದಿಲ್ಲ. ಸಮಾನತೆ ಬರಲಿಲ್ಲ. ಶರಣರ ಆಶಯವಾಗಿದ್ದ ಸಾಮಾಜಿಕ ಸಮಾನತೆ ಕುರಿತು ಇಂದು ಚಿಂತಿಸಬೇಕು‌ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಬೆಂಗಳೂರು: ವಿಶ್ವ ಗುರು ಬಸವಣ್ಣ ಹಾಗೂ ಅವರ ಸಮಕಾಲೀನ ಶರಣರು 900 ವರ್ಷಗಳ ಹಿಂದೆ ಸಾಮಾಜಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದ್ದರೂ‌ ಅಸಮಾನತೆ ಇನ್ನೂ ಅಳಿದಿಲ್ಲ. ಸಮಾನತೆ ಬರಲಿಲ್ಲ. ಶರಣರ ಆಶಯವಾಗಿದ್ದ ಸಾಮಾಜಿಕ ಸಮಾನತೆ ಕುರಿತು ಇಂದು ಚಿಂತಿಸಬೇಕು‌ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಏರ್ಪಡಿಸಿರುವ ಶಿವಯೋಗ ಸಂಭ್ರಮ ಅಸಂಖ್ಯ ಪ್ರಮಥರ ಗಣಮೇಳ ಸರ್ವಶರಣರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶರಣರು ಜಾತ್ಯತೀತ ಸುಂದರ ಸಮಾಜ ನಿರ್ಮಾಣಕ್ಕೆ ಹೋರಾಟ ನಡೆಸಿದ್ದಾರೆ. ಅನೇಕ ಮಾನವ ಹಕ್ಕುಗಳಿಗಾಗಿ ಪ್ರತಿಪಾದಿಸಿದ್ದಾರೆ. ಶೋಷಿತರು, ಕಾಯಕ ಯೋಗಿಗಳ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದರು.

ಜಾತಿ ಮತ್ತು ಧರ್ಮ ದ ಹೆಸರಿನಲ್ಲಿ ಶೋಷಣೆಯ ವಿರುದ್ಧ ಬಂಡಾಯ ವೆದ್ದು, ಕ್ರಾಂತಿ ಮಾಡಿದ್ದಾರೆ. ಜಾತ್ಯತೀತ ಮಾನವ ಧರ್ಮ ಉದಯಕ್ಕೆ ಶ್ರಮಿಸಿದ್ದಾರೆ. ಅದೇ ಶ್ರೇಷ್ಠ ವಾದ ಧರ್ಮ ಬಸವ ಧರ್ಮ. ಅವರು ಪ್ರತಿ ಪಾದಿಸಿದಂತಹ ಅನೇಕ ಮಾನವ ಹಕ್ಕುಗಳು ಕಾಯ್ದೆಯ ರೂಪದಲ್ಲಿ ಅನುಷ್ಠಾನ ವಾಗುತ್ತಿವೆ ಎಂದು ಹೇಳಿದರು.

ಮೊಟ್ಟ ಮೊದಲಿಗೆ ಸಂಸತ್ ಸ್ವರೂಪದ ಅನುಭವ ಮಂಟಪ ಆಯೋಜಿಸಿ, ಮಾನವ ಹಕ್ಕು, ಸಮಾನತೆಗೆ , ಸಾಮಾಜಿಕ ಪಿಡುಗಳ ಕುರಿತು ಚರ್ಚಿಸಿ, ನಿರ್ಣಯ ಕೈಗೊಂಡಿದ್ದು , ಅದೇ ಮಾದರಿಯಲ್ಲಿ ಸಂಸತ್ ನಲ್ಲಿ‌ ಚರ್ಚೆಗಳಾಗಿ ನಿರ್ಣಯಗಳಾಗುತ್ತಿವೆ‌. ಶರಣರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು‌ ಶರಣರ ಆಶಯದಂತೆ ಸುಂದರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು‌ ಅವರು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT