ಅಪಾಯದಿಂದ ಪಾರಾದ ರೋಹಿತ್ 
ರಾಜ್ಯ

ಉಡುಪಿ: ಸಾವು ಗೆದ್ದ ರೋಹಿತ್ ಖಾರ್ವಿ, ರಕ್ಷಣೆ ಮಾಡಿದ ಅಗ್ನಿಶಾಮಕ ದಳ

ಉಡುಪಿಯ ಮರವಂತೆಯಲ್ಲಿ ಬೋರ್ ವೆಲ್‍ ಕೆಲಸದ ವೇಳೆ ಮಣ್ಣು ಕುಸಿದು ಪ್ರಾಣಾಪಾಯಕ್ಕೆ ಸಿಲುಕಿದ್ದ ರೋಹಿತ್ ಖಾರ್ವಿ ಎಂಬಾತನನ್ನು ಕೊನೆಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ.

ಉಡುಪಿ: ಉಡುಪಿಯ ಮರವಂತೆಯಲ್ಲಿ ಬೋರ್ ವೆಲ್‍ ಕೆಲಸದ ವೇಳೆ ಮಣ್ಣು ಕುಸಿದು ಪ್ರಾಣಾಪಾಯಕ್ಕೆ ಸಿಲುಕಿದ್ದ ರೋಹಿತ್ ಖಾರ್ವಿ ಎಂಬಾತನನ್ನು ಕೊನೆಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಗಿದೆ.

ಉಡುಪಿಯ ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಇಂದು ಸಂಜೆ ರೋಹಿತ್ ರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬೈಂದೂರು ಬಿಜೆಪಿ ಶಾಸಕ ಸುಕುಮಾರ ಶೆಟ್ಟಿ ಅವರು, ಮರವಂತೆಯ ಅಗ್ನಿಶಾಮಕ ದಳದ ಕಾರ್ಯಾಚರಣೆ ರೋಹಿತ್ ರನ್ನು ರಕ್ಷಿಸಿದ್ದಾರೆ. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು. ಅಲ್ಲದೆ ರೋಹಿತ್ ಖಾರ್ವಿ ರಕ್ಷಣೆ ಮಾಡಿದ ತಂಡಕ್ಕೆ  ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಮರವಂತೆಯ ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ತೊಡಗಿದವರಿಗೆ 25 ಸಾವಿರ ನಗದು ನೀಡಿ, ಮರವಂತೆಯಲ್ಲೇ ಸನ್ಮಾನ ಮಾಡುತ್ತೇನೆ. ಇದು ನನ್ನ ವೈಯಕ್ತಿಕ ಮೊತ್ತ ಎಂದು ಸುಕುಮಾರ ಶೆಟ್ಟಿ ಹೇಳಿದರು.

ಅಲ್ಲದೆ ಯುವಕ ರೋಹಿತ್ ಖಾರ್ವಿಗೆ ಯಾವುದೇ ಗಾಯವಾಗದಂತೆ ರಕ್ಷಣೆಯಾಗಿದೆ. ಕೊಲ್ಲೂರು ಮೂಕಾಂಬಿಕಾ ದೇವಿ ಎಲ್ಲರಿಗೂ ಶಕ್ತಿ ಕೊಟ್ಟಳು. ಅಗ್ನಿಶಾಮಕ, ಜಿಲ್ಲಾಡಳಿತ ಕಾರ್ಯ ಯಶಸ್ವಿಯಾಗಿದೆ. ಘಟನಾ ಸ್ಥಳದಲ್ಲಿ ಸ್ಥಳೀಯರು, ಮಾಧ್ಯಮಗಳು ನಿರಂತರ ಕೆಲಸ ಮಾಡಿವೆ. ಅವರೆಲ್ಲರಿಗೂ ಅಭಿನಂದನೆ ಎಂದು ಹೇಳಿದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಪಾಯಕ್ಕೆ ಸಿಲುಕಿದ್ದ ರೋಹಿತ್ ಮಾತನಾಡಿದ್ದು, 'ಇದು ಅಜಾಗರೂಕತೆ ಅಲ್ಲ, ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ. ನಾವು ನಾಲ್ಕು ಜನ ಬೋರ್‍ವೆಲ್ ಕೆಲಸಕ್ಕೆ ತೆರಳಿದೆವು. ನಮ್ಮ ಕೆಲಸ ಅಂತಿಮ ಹಂತದಲ್ಲಿತ್ತು. ಏಕಾಏಕಿ ಸುತ್ತ ಇದ್ದ ಮಣ್ಣು ಸುಮಾರು ಹದಿನೈದು ಅಡಿ ಕೆಳಕ್ಕೆ ಕುಸಿಯಿತು. ನಮ್ಮದು ಯಾವುದೇ ಕಾರಣಕ್ಕೆ ಅಜಾಗರೂಕತೆಯಲ್ಲ. ಆಕಸ್ಮಿಕವಾಗಿ ನಡೆದ ಘಟನೆ ಇದು. 25 ವರ್ಷದಿಂದ ಈ ಕೆಲಸ ಮಾಡುತ್ತಿದ್ದೇನೆ. ಹಿಂದೆಂದೂ ಹೀಗಾಗಿಲ್ಲ. ಗದ್ದೆಯ ಮಣ್ಣು ಮೃದುವಾಗಿದ್ದರಿಂದ ನಾನು ಕುಸಿದು ಬಿದ್ದೆ. ನನ್ನ ಎದೆಯ ಮಟ್ಟದವರೆಗೆ ಮಣ್ಣು ಬಿದ್ದಿತ್ತು. ನಾನೇ ಮೇಲೇಳಲು ಪ್ರಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ಲ, ಈ ತರಹದ ಅನುಭವ ಇದೇ ಮೊದಲು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ