ಕಂಬಳ ಪ್ರತಿಭೆ ಶ್ರೀನಿವಾಸ್ ಗೌಡ ಅವರಿಗೆ ಸನ್ಮಾನ 
ರಾಜ್ಯ

ಕಂಬಳದ ಶ್ರೀನಿವಾಸ ಗೌಡರಿಗೆ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ ಲಕ್ಷ ರೂ. ನೆರವು: ಡಾ.ಅಶ್ವತ್ಥನಾರಾಯಣ

ಕಂಬಳದ ಶ್ರೀನಿವಾಸ ಗೌಡರಿಗೆ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ ಲಕ್ಷ ರೂ. ನೆರವು ನೀಡುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಣೆ ಮಾಡಿದ್ದಾರೆ.

ಬೆಂಗಳೂರು: ಕಂಬಳದ ಶ್ರೀನಿವಾಸ ಗೌಡರಿಗೆ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ ಲಕ್ಷ ರೂ. ನೆರವು ನೀಡುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಣೆ ಮಾಡಿದ್ದಾರೆ.

ಕಂಬಳ ಕ್ರೀಡೆಯಲ್ಲಿ ದಾಖಲೆ ವೇಗದಲ್ಲಿ ಓಡಿ ಭಾರತದ ಉಸೇನ್ ಬೋಲ್ಟ್ ಎಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಶ್ರೀನಿವಾಸಗೌಡ ಅವರಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಮ್ಮ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಕಂಬಳ ಕ್ರೀಡೆಯಲ್ಲಿ ಅತಿ ವೇಗವಾಗಿ ಕೋಣಗಳನ್ನು ಓಡಿಸಿ ದಾಖಲೆ ನಿರ್ಮಿಸಿದ ಶ್ರೀನಿವಾಸಗೌಡ ಅವರನ್ನು ನಗರದಲ್ಲಿ ಸೋಮವಾರ ಅಭಿನಂದಿಸಿ ಆರ್ಥಿಕ ಬಹುಮಾನ ಪ್ರಕಟಿಸಿದ್ದಾರೆ.

“ಶ್ರೀನಿವಾಸಗೌಡ ಅವರು ತಮ್ಮ ಪ್ರತಿಭೆ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಮಾತ್ರವಲ್ಲ, ಕಂಬಳ ಬೇಕು-ಬೇಡ ಎನ್ನುವವರು, ಅದಕ್ಕೆ ಅಡಚಣೆ ಉಂಟುಮಾಡುವವರಿಗೆ ಒಳ್ಳೆಯ ಸಂದೇಶ ನೀಡಿದ್ದಾರೆ. ಅವರನ್ನು ಪ್ರೋತ್ಸಾಹಿಸುವ ಜತೆಗೆ ಕಂಬಳ ಕ್ರೀಡೆಯಲ್ಲಿ ಪಾಲ್ಗೊಳ್ಳುವವರನ್ನು ಹುರಿದುಂಬಿಸುವ ಉದ್ದೇಶದಿಂದ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದಿಂದ 1 ಲಕ್ಷ ರೂ ನೀಡುವುದಾಗಿ” ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT