ರಾಜ್ಯ

ನಂಜನಗೂಡು: ಕರೆ ಬರುತ್ತಿದ್ದಂತೆ ಏಕಾ ಏಕೀ ಮೊಬೈಲ್ ಸ್ಫೋಟ, ಬೈಕ್ ಸವಾರನ ಪರಿಸ್ಥಿತಿ ಗಂಭೀರ!

Vishwanath S

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದಾಗ ಮೊಬೈಲ್ ಸ್ಫೋಟ ಗೊಂಡ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ‌ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಎಂಬಲ್ಲಿ ವರದಿಯಾಗಿದೆ.
 
ಹೆಚ್ ಎಂ ಬಸವರಾಜು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ. ಕರೆ ಬರುತ್ತಿದ್ದಂತೆ ಏಕಾ ಏಕೀ ಮೊಬೈಲ್ ಸ್ಫೋಟಗೊಂಡಿದೆ. ಸ್ಫೋಟದಿಂದ ನಿಯಂತ್ರಣ ತಪ್ಪಿ ಬಸವರಾಜ್ ಅವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಅವರ ಎದೆ, ಕುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT