ಸಂಗ್ರಹ ಚಿತ್ರ 
ರಾಜ್ಯ

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು

ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಹೊಸಪೇಟೆ: ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಗ್ರಾಮದ ಕಣವಿಮಾರೆಮ್ಮ ದೇವಸ್ಥಾನ ಬಳಿಯ ಮುಖ್ಯ ರಸ್ತೆಯಲ್ಲಿ ಬೆಳಗಿನ ಜಾವದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಪಾದಚಾರಿ ಮೇಲೆ ಹರಿಸಿದ ಹಿನ್ನಲೆ ಸ್ಥಳದಲ್ಲೇ ರಾಮಸಗಾರ ಗ್ರಾಮದ ಜಿ.ಚಂದ್ರಗೌಡ(65) ಮೃತಪಟ್ಟ ದುರ್ಧೈವಿ. ಜಿ.ಚಂದ್ರಗೌಡ ಮೃತನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಕೊಲೆ ಹಾಗೂ ಹತ್ಯೆಗೈದಿರುವುದು ಶೆಂಕೆ ಗೋಚರವಾಗುತ್ತಿವೆ. 

2008ರಲ್ಲಿ ಹೊಸಪೇಟೆಯಲ್ಲಿ ಅಂದಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎಂ.ಸೂರ್ಯನಾರಾಯಣ ಅವರನ್ನು ಧ್ವಜಾರೋಹಣ ಸಂದರ್ಭದಲ್ಲಿ ಗುಂಡು ಹಾರಿಸಿ, ಹತ್ಯೆಗೈದಿದ್ದ ಜಿ.ಚಂದ್ರಗೌಡ ಮೇಲೆ ಪ್ರಕರಣ ದಾಖಲಾಗಿತ್ತು. 2018ರಲ್ಲಿ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ, ಈಗ ರಾಮಸಾಗರ ಗ್ರಾಮದ ಹೊಸಪೇಟೆ ರಸ್ತೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ನಾನಾ ಅನುಮಾನುಗಳಿಗೆ ಎಡೆ ಮಾಡಿಕೊಟ್ಟಿದೆ. ಘಟನೆ ಸಂಬಂಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT