ರಾಜ್ಯ

ಹೊಸಪೇಟೆ: ಪಾದಚಾರಿ ಮೇಲೆ ಹರಿದ ವಾಹನ, ಸ್ಥಳದಲ್ಲೇ ವ್ಯಕ್ತಿ ಸಾವು

Manjula VN

ಹೊಸಪೇಟೆ: ಅಪಘಾತದಿಂದ ಪಾದಚಾರಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದಿದೆ. 

ಗ್ರಾಮದ ಕಣವಿಮಾರೆಮ್ಮ ದೇವಸ್ಥಾನ ಬಳಿಯ ಮುಖ್ಯ ರಸ್ತೆಯಲ್ಲಿ ಬೆಳಗಿನ ಜಾವದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಪಾದಚಾರಿ ಮೇಲೆ ಹರಿಸಿದ ಹಿನ್ನಲೆ ಸ್ಥಳದಲ್ಲೇ ರಾಮಸಗಾರ ಗ್ರಾಮದ ಜಿ.ಚಂದ್ರಗೌಡ(65) ಮೃತಪಟ್ಟ ದುರ್ಧೈವಿ. ಜಿ.ಚಂದ್ರಗೌಡ ಮೃತನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ. ಕೊಲೆ ಹಾಗೂ ಹತ್ಯೆಗೈದಿರುವುದು ಶೆಂಕೆ ಗೋಚರವಾಗುತ್ತಿವೆ. 

2008ರಲ್ಲಿ ಹೊಸಪೇಟೆಯಲ್ಲಿ ಅಂದಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎಂ.ಸೂರ್ಯನಾರಾಯಣ ಅವರನ್ನು ಧ್ವಜಾರೋಹಣ ಸಂದರ್ಭದಲ್ಲಿ ಗುಂಡು ಹಾರಿಸಿ, ಹತ್ಯೆಗೈದಿದ್ದ ಜಿ.ಚಂದ್ರಗೌಡ ಮೇಲೆ ಪ್ರಕರಣ ದಾಖಲಾಗಿತ್ತು. 2018ರಲ್ಲಿ ಪ್ರಕರಣ ಇತ್ಯಾರ್ಥವಾಗಿತ್ತು. ಆದರೆ, ಈಗ ರಾಮಸಾಗರ ಗ್ರಾಮದ ಹೊಸಪೇಟೆ ರಸ್ತೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ನಾನಾ ಅನುಮಾನುಗಳಿಗೆ ಎಡೆ ಮಾಡಿಕೊಟ್ಟಿದೆ. ಘಟನೆ ಸಂಬಂಧ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

SCROLL FOR NEXT