ಸಂಗ್ರಹ ಚಿತ್ರ 
ರಾಜ್ಯ

ಸಿನಿಮೀಯ ರೀತಿಯಲ್ಲಿ ನಕಲಿ ಪೊಲೀಸರಿಂದ ವಂಚನೆ

ಪೊಲೀಸ್ ವೇಷದಲ್ಲಿ ಬಂದ ಕಳ್ಳರ ತಂಡ, ಸಿನಿಮೀಯ ಮಾದರಿಯಲ್ಲಿ ವ್ಯಕ್ತಿಯೊಬ್ಬನಿಂದ 2.10 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದಿದೆ.

ಹೊಸಪೇಟೆ: ಪೊಲೀಸ್ ವೇಷದಲ್ಲಿ ಬಂದ ಕಳ್ಳರ ತಂಡ, ಸಿನಿಮೀಯ ಮಾದರಿಯಲ್ಲಿ ವ್ಯಕ್ತಿಯೊಬ್ಬನಿಂದ 2.10 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದಿದೆ.

ಮೃತ್ಯುಂಜಯನಗರದ ಸಿದ್ದರಾಮಪ್ಪ ಮೋಸ ಹೋದ ವ್ಯಕ್ತಿಯಾಗಿದ್ದು. ಇದೇ ಭಾನುವಾರ ಸಿದ್ದರಾಮಪ್ಪ ಐದು ಉಂಗುರ, ಡಾಲರ್ ಸಹಿತ ಚಿನ್ನದ ಸರ ಹಾಕಿಕೊಂಡು ದಾರಿಯಲ್ಲಿ ಹೋಗುತ್ತಿದ್ದರು. ಈತನನ್ನು ನಕಲಿ ಪೊಲೀಸರು ಬೈಕ್‌ನಲ್ಲಿ ಹಿಂಬಾಲಿಸಿ. ಬಳಿಕ ಸಿದ್ದರಾಮಪ್ಪ ಮುಂದೆ ಬಂದು ಮೈಮೇಲೆ ಬೆಲೆ ಬಾಳುವ ಚಿನ್ನಾಭರಣ ಹಾಕಿಕೊಂಡು ಓಡಾಡಬಾರದೆಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಂಬಿಕೆ ಬರಲಿ ಎಂದು ನಕಲಿ ಪೊಲೀಸ್ ಐಡಿ ಕಾರ್ಡ್ ಕೂಡ ತೋರಿಸಿದ್ದಾರೆ, ನಂತರ ಚಿನ್ನಾಭರಣ ಬಿಚ್ಚುತಿದ್ದಂತೆ ಅವುಗಳನ್ನ ಸುರಕ್ಷಿತವಾಗಿ ಕಟ್ಟಿಕೊಡುವುದಾಗಿ ಹೇಳಿ ಪಡೆದು ಬಟ್ಟೆಯಲ್ಲಿ ಸುತ್ತಿ ಕೊಡುವ ನಾಟಕ ಆಡಿ ಅವುಗಳನ್ನ ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಬಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ರಾಜಸ್ಥಾನ: 12ನೇ ತರಗತಿ ವಿದ್ಯಾರ್ಥಿನಿ ಅಪಹರಿಸಿ, ಚಲಿಸುವ ಕಾರಿನಲ್ಲೇ ಗ್ಯಾಂಗ್ ರೇಪ್!

SCROLL FOR NEXT