ಸಂಗ್ರಹ ಚಿತ್ರ 
ರಾಜ್ಯ

ಸಿನಿಮೀಯ ರೀತಿಯಲ್ಲಿ ನಕಲಿ ಪೊಲೀಸರಿಂದ ವಂಚನೆ

ಪೊಲೀಸ್ ವೇಷದಲ್ಲಿ ಬಂದ ಕಳ್ಳರ ತಂಡ, ಸಿನಿಮೀಯ ಮಾದರಿಯಲ್ಲಿ ವ್ಯಕ್ತಿಯೊಬ್ಬನಿಂದ 2.10 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದಿದೆ.

ಹೊಸಪೇಟೆ: ಪೊಲೀಸ್ ವೇಷದಲ್ಲಿ ಬಂದ ಕಳ್ಳರ ತಂಡ, ಸಿನಿಮೀಯ ಮಾದರಿಯಲ್ಲಿ ವ್ಯಕ್ತಿಯೊಬ್ಬನಿಂದ 2.10 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದಿದೆ.

ಮೃತ್ಯುಂಜಯನಗರದ ಸಿದ್ದರಾಮಪ್ಪ ಮೋಸ ಹೋದ ವ್ಯಕ್ತಿಯಾಗಿದ್ದು. ಇದೇ ಭಾನುವಾರ ಸಿದ್ದರಾಮಪ್ಪ ಐದು ಉಂಗುರ, ಡಾಲರ್ ಸಹಿತ ಚಿನ್ನದ ಸರ ಹಾಕಿಕೊಂಡು ದಾರಿಯಲ್ಲಿ ಹೋಗುತ್ತಿದ್ದರು. ಈತನನ್ನು ನಕಲಿ ಪೊಲೀಸರು ಬೈಕ್‌ನಲ್ಲಿ ಹಿಂಬಾಲಿಸಿ. ಬಳಿಕ ಸಿದ್ದರಾಮಪ್ಪ ಮುಂದೆ ಬಂದು ಮೈಮೇಲೆ ಬೆಲೆ ಬಾಳುವ ಚಿನ್ನಾಭರಣ ಹಾಕಿಕೊಂಡು ಓಡಾಡಬಾರದೆಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಂಬಿಕೆ ಬರಲಿ ಎಂದು ನಕಲಿ ಪೊಲೀಸ್ ಐಡಿ ಕಾರ್ಡ್ ಕೂಡ ತೋರಿಸಿದ್ದಾರೆ, ನಂತರ ಚಿನ್ನಾಭರಣ ಬಿಚ್ಚುತಿದ್ದಂತೆ ಅವುಗಳನ್ನ ಸುರಕ್ಷಿತವಾಗಿ ಕಟ್ಟಿಕೊಡುವುದಾಗಿ ಹೇಳಿ ಪಡೆದು ಬಟ್ಟೆಯಲ್ಲಿ ಸುತ್ತಿ ಕೊಡುವ ನಾಟಕ ಆಡಿ ಅವುಗಳನ್ನ ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಬಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT