ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ! 
ರಾಜ್ಯ

ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ!

ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.

ಚಾಮರಾಜನಗರ: ಎಷ್ಟೇ ಮನವಿ ಮಾಡಿದರೂ ಜಮೀನಿಗೆ ವಿದ್ಯುತ್ ಸಂಪರ್ಕ ನೀಡದಿದ್ದರಿಂದ ಬೇಸತ್ತ ರೈತನ ಕುಟುಂಬವೊಂದು ವಿಷದ ಬಾಟಲಿ ಹಿಡಿದು ಆತಂಕ ಸೃಷ್ಟಿಸಿದ ಘಟನೆ ಹನೂರಿನಲ್ಲಿ ನಡೆದಿದೆ.

ಹನೂರು ತಾಲೂಕಿನ ಬೈಲೂರು ಗ್ರಾಪಂ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಪ್ರಭುಸ್ವಾಮಿ ಎಂಬ ರೈತ ವಿಷದ ಬಾಟಲಿಯೊಂದಿಗೆ ತನ್ನ ಇಡೀ ಕುಟುಂಬ ಕರೆತಂದು ಚೆಸ್ಕಾಂ ಕಚೇರಿ ಮುಂದೆ ತಮ್ಮ ಅಳಲು ತೋಡಿಕೊಂಡರು. ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.ವಿಷದ ಬಾಟಲಿ ಹಿಡಿದು ಕಚೇರಿಗೆ ಬಂದ ರೈತ ಕುಟುಂಬ.

ಕೊನೆಗೆ ಸ್ಥಳಕ್ಕೆ ಆಗಮಿಸಿದ ಜ್ಯೂನಿಯರ್ ಎಂಜಿನಿಯರ್ ನೌಷಾದ್ ಪಾಷಾ, ಪಕ್ಕದ ಜಮೀನಿನ ಮಾಲೀಕರಿಗೂ ಪ್ರಭುಸ್ವಾಮಿ ಅವರ ನಡುವೆ ವ್ಯಾಜ್ಯ ಇರುವುದರಿಂದ ಸಂಪರ್ಕ ನೀಡಲು ವಿಳಂಬವಾಗಿದೆ.‌ ನಾಳೆ ಪೊಲೀಸರ ಸಮ್ಮುಖದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ರೈತನ ಕುಟುಂಬ ಪ್ರತಿಭಟನೆ ವಾಪಸ್ ಪಡೆದು ಹಿಂದಿರುಗಿತು‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT