ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ! 
ರಾಜ್ಯ

ಕೃಷಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಚೆಸ್ಕಾಂ ಸಿಬ್ಬಂದಿ.. ವಿಷದ ಬಾಟಲಿ ಹಿಡಿದು ರೈತ ಕುಟುಂಬ ಹೈಡ್ರಾಮಾ!

ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.

ಚಾಮರಾಜನಗರ: ಎಷ್ಟೇ ಮನವಿ ಮಾಡಿದರೂ ಜಮೀನಿಗೆ ವಿದ್ಯುತ್ ಸಂಪರ್ಕ ನೀಡದಿದ್ದರಿಂದ ಬೇಸತ್ತ ರೈತನ ಕುಟುಂಬವೊಂದು ವಿಷದ ಬಾಟಲಿ ಹಿಡಿದು ಆತಂಕ ಸೃಷ್ಟಿಸಿದ ಘಟನೆ ಹನೂರಿನಲ್ಲಿ ನಡೆದಿದೆ.

ಹನೂರು ತಾಲೂಕಿನ ಬೈಲೂರು ಗ್ರಾಪಂ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದ ಪ್ರಭುಸ್ವಾಮಿ ಎಂಬ ರೈತ ವಿಷದ ಬಾಟಲಿಯೊಂದಿಗೆ ತನ್ನ ಇಡೀ ಕುಟುಂಬ ಕರೆತಂದು ಚೆಸ್ಕಾಂ ಕಚೇರಿ ಮುಂದೆ ತಮ್ಮ ಅಳಲು ತೋಡಿಕೊಂಡರು. ನಾಲ್ಕು ತಿಂಗಳಿಂದ ಜಮೀನಿಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರಿಂದ ನೀರು ಹಾಯಿಸಲಾಗದೇ ಎರಡು ಎಕರೆ ಅರಿಶಿಣ ಫಸಲು ಒಣಗಿದೆ. ಚೆಸ್ಕಾಂ ಸಿಬ್ಬಂದಿಗೆ ಲಂಚ ನೀಡಿದರೂ ಸಂಪರ್ಕ ಮಾತ್ರ ಕೊಡದೇ ಸತಾಯಿಸುತ್ತಿದ್ದಾರೆ. ಸಮಸ್ಯೆಗೆ ಪರಿಹರಿಸದಿದ್ದರೇ ವಿಷ ಸೇವಿಸುವುದಾಗಿ ಪಟ್ಟು ಹಿಡಿದು ಕುಳಿತರು.ವಿಷದ ಬಾಟಲಿ ಹಿಡಿದು ಕಚೇರಿಗೆ ಬಂದ ರೈತ ಕುಟುಂಬ.

ಕೊನೆಗೆ ಸ್ಥಳಕ್ಕೆ ಆಗಮಿಸಿದ ಜ್ಯೂನಿಯರ್ ಎಂಜಿನಿಯರ್ ನೌಷಾದ್ ಪಾಷಾ, ಪಕ್ಕದ ಜಮೀನಿನ ಮಾಲೀಕರಿಗೂ ಪ್ರಭುಸ್ವಾಮಿ ಅವರ ನಡುವೆ ವ್ಯಾಜ್ಯ ಇರುವುದರಿಂದ ಸಂಪರ್ಕ ನೀಡಲು ವಿಳಂಬವಾಗಿದೆ.‌ ನಾಳೆ ಪೊಲೀಸರ ಸಮ್ಮುಖದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ರೈತನ ಕುಟುಂಬ ಪ್ರತಿಭಟನೆ ವಾಪಸ್ ಪಡೆದು ಹಿಂದಿರುಗಿತು‌.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ: ಮೇಲ್ಮನವಿ ಸಲ್ಲಿಸಲು ಸಿಎಂ ಸೂಚನೆ

ಸಿದ್ದರಾಮಯ್ಯ ಸಿಎಂ ಅವಧಿಗೆ ಯಾವುದೇ ಡೆಡ್​ಲೈನ್ ನೀಡಿಲ್ಲ: ಪರಮೇಶ್ವರ

ಸ್ಪೀಕರ್ ಯು.ಟಿ. ಖಾದರ್ ಗೂ ಮೆತ್ತಿಕೊಂಡ 'ಭ್ರಷ್ಟಾಚಾರ' ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ!

ಬಾಂಗ್ಲಾ ಉದ್ಧಟತನ: ಭಾರತದ ಭೂಭಾಗ ಸೇರಿಸಿಕೊಂಡ ನಕ್ಷೆ ಪಾಕ್ ಗೆ ನೀಡಿದ ಹಂಗಾಮಿ PM ಯೂನಸ್; ವಿವಾದ ಸೃಷ್ಠಿ!

ಮಗನಿಗೆ ಅದೃಷ್ಟ ತಂದ ತಾಯಿಯ ಹುಟ್ಟುಹಬ್ಬದ ದಿನಾಂಕ: UAE ಲಾಟರಿಯಲ್ಲಿ 240 ಕೋಟಿ ರೂ. ಗೆದ್ದ ಭಾರತೀಯ

SCROLL FOR NEXT