ವಾಣಿಜ್ಯ ಮಳಿಗೆಗಳು 
ರಾಜ್ಯ

ಹೊಸಪೇಟೆ: ದರ್ಗಾ ಮಸೀದಿಗೆ ಸೇರಿದ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಆದೇಶ

ನಗರದ ದರ್ಗಾ ಹಾಗೂ ಮಸೀದಿ ಸೇರಿದಂತೆ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಹೊಸಪೇಟೆ ನಗರಸಭೆ ಆದೇಶ ಮಾಡಿದೆ.

ಹೊಸಪೇಟೆ: ನಗರದ ದರ್ಗಾ ಮಸೀದಿಗೆ ಸೇರಿದ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಹೊಸಪೇಟೆ ನಗರಸಭೆ ಆದೇಶ ಮಾಡಿದೆ.

ಇಂದು ಸಂಜೆಯೊಳಗೆ ಸ್ವಯಂ ಪ್ರೇರಿತರಾಗಿ ಮಳಿಗೆ ತೆರವುಗೊಳಿಸದಿದ್ದರೆ ಜೆ.ಸಿ.ಬಿ.ಮೂಲಕ ಡೆಮಾಲಿಸ್ ಮಾಡುವುದಾಗಿ ನಗರಸಭೆ ಎಚ್ಚರಿಕೆ ನೀಡಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ರಸ್ತೆ ಒತ್ತುವರಿಯಾಗಿರುವ ಕಟ್ಟಡಗಳನ್ನ ತೆರವುಗೊಳಿಸುತ್ತಿರುವುದಾಗಿ ನಗರಸಭೆ  ಹೇಳಿಕೊಂಡಿದೆ.

ನಗರಸಭೆ ನೂಟೀಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಸೀದಿಯ ಆಡಳಿತ ಮಂಡಳಿಯ ಸದಸ್ಯರು ಸ್ವಯಂ ಪ್ರೇರಿತರಾಗಿ ತರಾತುರಿಯಲ್ಲಿ ಮಳಿಗೆ ತೆರವುಗೊಳಿಸುತ್ತಿದ್ದಾರೆ.

ನಗರಸಭೆಯ ತರಾತುರಿ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಮಸೀದಿ ಆಡಳಿತ ಮಂಡಳಿ, ಕನಿಷ್ಠ ಒಂದು ವಾರ ಕಾಲಾವಕಾಶ ನೀಡಿದರೆ ಇಲ್ಲಿರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತಿತ್ತು ಎಂದು ಹೇಳಿದೆ. 

ದರ್ಗಾ ಹಾಗೂ ಮಸೀದಿ ವಕ್ಫ್ ಬೋರ್ಡ್ ಗೆ ಸಂಭಂದಿಸಿದೆ. ಆದರೆ ರಾಜಕೀಯ ದುರುದ್ದೇಶದಿಂದ ಈ ರೀತಿಯಾಗಿ ಮಸೀದಿಯನ್ನ ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!