ವಿಧಾನಸೌಧದಲ್ಲಿ ಶೆಟ್ಟರ್ ಸಭೆ 
ರಾಜ್ಯ

ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಉದ್ಯಮಿಗಳು ಕೈಜೋಡಿಸಬೇಕು: ಜಗದೀಶ್ ಶೆಟ್ಟರ್

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಸಹಕರಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಸಹಕರಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ – ಇ.ಎಸ್.ಡಿ.ಎಂ ವಲಯದಲ್ಲಿ ಕರ್ನಾಟಕ ಅಂತರ್ಗವಾಗಿಯೇ ಗಮನಾರ್ಹ ಸಾಧನೆಮಾಡಿದ್ದು, ಇದೀಗ ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಮುಂದಾಗಬೇಕು ಎಂದು ಶೆಟ್ಟರ್ ಹೇಳಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಹಯೋಗದೊಂದಿಗೆ “ ಜಾಗತಿಕವಾಗಿ ಇ.ಎಸ್.ಡಿ.ಎಂ. ಕ್ಲಸ್ಟರ್ ಗಳನ್ನು ಸ್ಪರ್ಧಾತ್ಮಕವಾಗಿ ಅಭಿವೃದ್ಧಿಪಡಿಸುವ” ಕುರಿತಂತೆ ನಗರದಲ್ಲಿ ಬುಧವಾರ ಆಯೋಜಿಸಲಾದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ ನಿರ್ದಿಷ್ಟ ಉತ್ಪನ್ನಗಳನ್ನು ಉತ್ಪಾದಿಸುವ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯಡಿ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಅಂಡ್ ಮ್ಯಾನ್ಯುಫೆಕ್ಚರಿಂಗ್ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ಈ ವಲಯದಲ್ಲಿ ಕರ್ನಾಟಕ ಬಲಿಷ್ಠವಾಗಿದ್ದು, ಬಂಡವಾಳ ಹೂಡಲು ಉದ್ಯಮಿಗಳಿಗೆ ವಿಪುಲ ಅವಕಾಶಗಳಿವೆ ಎಂದರು.

ಈಗಾಗಲೇ ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇ.ಎಸ್.ಡಿ.ಎಂ ಕ್ಲಸ್ಟರ್ ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹುಬ್ಬಳ್ಳಿ ಮತ್ತು ಕೋಲಾರ ಜಿಲ್ಲೆಗಳನ್ನು ಸಹ ಈ ಕ್ಷೇತ್ರಕ್ಕೆ ಸೇರ್ಪಡೆ ಮಾಡಲು ಪರಿಶೀಲನೆ ಮಾಡಲಾಗುತ್ತಿದೆ. ಇದೀಗ ಕೈಗಾರಿಕೋದ್ಯಮಿಗಳು ಕೈ ಜೋಡಿಸಿ ಈ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT