ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ 
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ

ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಇದಕ್ಕೂ ಮೊದಲು ಕಳೆದ ಜನವರಿಯಲ್ಲಿ ಮೈಸೂರು ಪಾರಂಪರಿಕಾ ಸಮಿತಿ ಸದಸ್ಯ ಹಾಗೂ ಇತಿಹಾಸಕಾರ ಪ್ರೋ. ಎನ್.ಎಸ್. ರಂಗರಾಜು ವಿಗ್ರಹದ ಮೇಲೆ ಕಾಣಿಸಿಕೊಂಡಿರುವ ಬಿರುಕುಗಳನ್ನು ಪತ್ತೆ ಹಚ್ಚಿ, ಐತಿಹಾಸಿಕ ನಂದಿ ವಿಗ್ರಹ ಮತ್ತಷ್ಟು ಹಾನಿಗೊಳ್ಳುವುದನ್ನು ತಡೆಯಲು ಸೂಕ್ತ ನಿಗ್ರಹ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು.

ನಂದಿ ಪ್ರತಿಮೆಯ ಬಲ ತೊಡೆಯ ಬಳಿ ಮತ್ತು ಏಕಶಿಲೆಯಲ್ಲಿ ಕೆತ್ತಿದ ಮುಖದಲ್ಲಿ ಬಿರುಕುಗಳನ್ನು ರಂಗರಾಜು ಅವರು ಪತ್ತೆ ಹಚ್ಚಿದ್ದರು. ನಾಲ್ವಡಿ ಕೃಷ್ಣರಾಜ ಓಡೆಯರ್ ಅವರ ನೆನಪಿಗಾಗಿ ದಿ. ಸರ್ ಎಂ. ವಿಶ್ವೇಶ್ವರಯ್ಯ ನಂದಿ ಪ್ರತಿಮೆ ಯನ್ನು ಉದ್ಘಾಟಿಸಿದ್ದರು.

ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು 1659-73ರಲ್ಲಿ ನಿರ್ಮಾಣಗೊಂಡಿದೆ. ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರ ಬಿಂದು ವಾಗಿರುವ ಈ ನಂದಿ ವಿಗ್ರಹ. ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತಕ್ಕೆ ತಿಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!