ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ 
ರಾಜ್ಯ

ಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ

ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಇದಕ್ಕೂ ಮೊದಲು ಕಳೆದ ಜನವರಿಯಲ್ಲಿ ಮೈಸೂರು ಪಾರಂಪರಿಕಾ ಸಮಿತಿ ಸದಸ್ಯ ಹಾಗೂ ಇತಿಹಾಸಕಾರ ಪ್ರೋ. ಎನ್.ಎಸ್. ರಂಗರಾಜು ವಿಗ್ರಹದ ಮೇಲೆ ಕಾಣಿಸಿಕೊಂಡಿರುವ ಬಿರುಕುಗಳನ್ನು ಪತ್ತೆ ಹಚ್ಚಿ, ಐತಿಹಾಸಿಕ ನಂದಿ ವಿಗ್ರಹ ಮತ್ತಷ್ಟು ಹಾನಿಗೊಳ್ಳುವುದನ್ನು ತಡೆಯಲು ಸೂಕ್ತ ನಿಗ್ರಹ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು.

ನಂದಿ ಪ್ರತಿಮೆಯ ಬಲ ತೊಡೆಯ ಬಳಿ ಮತ್ತು ಏಕಶಿಲೆಯಲ್ಲಿ ಕೆತ್ತಿದ ಮುಖದಲ್ಲಿ ಬಿರುಕುಗಳನ್ನು ರಂಗರಾಜು ಅವರು ಪತ್ತೆ ಹಚ್ಚಿದ್ದರು. ನಾಲ್ವಡಿ ಕೃಷ್ಣರಾಜ ಓಡೆಯರ್ ಅವರ ನೆನಪಿಗಾಗಿ ದಿ. ಸರ್ ಎಂ. ವಿಶ್ವೇಶ್ವರಯ್ಯ ನಂದಿ ಪ್ರತಿಮೆ ಯನ್ನು ಉದ್ಘಾಟಿಸಿದ್ದರು.

ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು 1659-73ರಲ್ಲಿ ನಿರ್ಮಾಣಗೊಂಡಿದೆ. ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರ ಬಿಂದು ವಾಗಿರುವ ಈ ನಂದಿ ವಿಗ್ರಹ. ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತಕ್ಕೆ ತಿಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT