ರಾಜ್ಯ

ಬನ್ನೇರುಘಟ್ಟ ಉದ್ಯಾನವನವನ್ನು ಸೂಕ್ಷ್ಮ ವಲಯವಾಗಿ ಕೂಡಲೇ ಘೋಷಿಸಿ: ಬಿ ಎಸ್ ಯಡಿಯೂರಪ್ಪ ಕೇಂದ್ರಕ್ಕೆ ಪತ್ರ  

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವನ್ನು ಕೂಡಲೇ ಪರಿಸರ ಸೂಕ್ಷ್ಮ ವಲಯವನ್ನಾಗಿ(ಇಎಸ್ ಝಡ್) ಘೋಷಿಸಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವನ್ನು ಕೂಡಲೇ ಪರಿಸರ ಸೂಕ್ಷ್ಮ ವಲಯವನ್ನಾಗಿ(ಇಎಸ್ ಝಡ್) ಘೋಷಿಸಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.


ಈ ಕುರಿತು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವದೇಕರ್ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯ ಸರ್ಕಾರದ ಶಿಫಾರಸಿನಂತೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿ ಘೋಷಿಸಿ ಅಧಿಸೂಚನೆ ಹೊರಡಿಸಿ. ಅಂತಿಮ ಅಧಿಸೂಚನೆ ಹೊರಬರದ ಕಾರಣ ಅಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳು ನಿಂತುಹೋಗಿವೆ ಎಂದಿದ್ದಾರೆ.


ಬೆಂಗಳೂರು ನಗರಕ್ಕೆ ಹತ್ತಿರದಲ್ಲಿ ಈ ಉದ್ಯಾನವನ ಇರುವುದರಿಂದ ರಾಜ್ಯ ಸರ್ಕಾರ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು 100 ಮೀಟರ್ ನಿಂದ 1 ಕಿಲೋ ಮೀಟರ್ ಅಂತರದಲ್ಲಿ 268.96 ಚದರ ಕಿಲೋ ಮೀಟರ್ ನಿಂದ 168.84 ಚದರ ಕಿಲೋ ಮೀಟರ್ ಗೆ ತಗ್ಗಿಸಬೇಕೆಂದು ಪತ್ರದಲ್ಲಿ ಸಿಎಂ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!