ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್'ಸಿ ವಿದ್ಯಾರ್ಥಿನಿ

ಎಸ್ಎಸ್ಎಲ್'ಸಿ ಪರೀಕ್ಷೆ ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ನಡುವೆ ಪರೀಕ್ಷೆ ಎದುರಿಸಲು ಭೀತಿಗೊಳಗಾಗಿರುವ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. 

ತುಮಕೂರು: ಎಸ್ಎಸ್ಎಲ್'ಸಿ ಪರೀಕ್ಷೆ ಹತ್ತಿರ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ನಡುವೆ ಪರೀಕ್ಷೆ ಎದುರಿಸಲು ಭೀತಿಗೊಳಗಾಗಿರುವ 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. 

ವರ್ಷಿತಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದೆ. ಅಯ್ಯಪ್ಪಸ್ವಾಮಿ ಎಕ್ಸ್ ಟೆನ್ಷನ್ ಬಳಿಯಿರುವ ನಿವಾದಲ್ಲಿ ಕಳೆದ ಮಂಗಳವಾರ ರಾತ್ರಿ 7 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ. 

ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಗಣಿತ ಹಾಗೂ ಇಂಗ್ಲೀಷ್ ವಿಷಯಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು. ಸೋರಿಕೆಯಾಗಿದ್ದ ಈ ಪ್ರಶ್ನೆ ಪತ್ರಿಗೆಗಳನ್ನು ವರ್ಷಿತಾ ವಾಟ್ಸ್ ಅಪ್ ಮೂಲಕ ನನ್ನ ಸ್ನೇಹಿತರಿಗೆ ಕಳುಹಿಸಿದ್ದಾನೆ. ಈ ವಿಚಾರ ತಿಳಿದ ಪೋಷಕರು ವರ್ಷಿತಾಗೆ ಬೈದಿದ್ದಾರೆ. 

ವರ್ಷಿತಾ ವಿದ್ಯಾಭ್ಯಾಸದಲ್ಲಿ ಉತ್ತಮವಾಗಿರಲಿಲ್ಲ. ಚೇತನ್ ಇಂಗ್ಲೀಷ್ ಶಾಲೆಯಲ್ಲಿ ಓದುತ್ತಿದ್ದು, ಇತ್ತೀಚೆಗಷ್ಟೇ ಶಾಲಾ ಆಡಳಿತ ಮಂಡಳಿ ವರ್ಷಿತಾ ಪೋಷಕರಿಗೆ ದೂರು ನೀಡಿದ್ದರು. ಅಲ್ಲದೆ, ಸಲಹೆಗಳನ್ನೂ ನೀಡಿದ್ದರು. ಈ ವಿಚಾರಕ್ಕೆ ವರ್ಷಿತಾ ಪೋಷಕರು ಮಗಳಿಗೆ ಬೈದಿದ್ದು, ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT