ಕರುಣಾಕರ ರೆಡ್ಡಿ 
ರಾಜ್ಯ

ಬಳ್ಳಾರಿ ವಿಭಜಿಸಿ, ಹರಪನಹಳ್ಳಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸಿ: ಕರುಣಾಕರ ರೆಡ್ಡಿ

ಅಖಂಡ ಬಳ್ಳಾರಿ ಜಿಲ್ಲೆಯನ್ನು ಮೂರು ಭಾಗ ಮಾಡಿ ಹರಪನಹಳ್ಳಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದ ನಿಯೋಗ ಮನವಿ ಮಾಡಿದೆ

ಬೆಂಗಳೂರು: ಅಖಂಡ ಬಳ್ಳಾರಿ ಜಿಲ್ಲೆಯನ್ನು ಮೂರು ಭಾಗ ಮಾಡಿ ಹರಪನಹಳ್ಳಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದ ನಿಯೋಗ ಮನವಿ ಮಾಡಿದೆ.

ಆಮೂಲಕ ವಿಜಯನಗರ ಜಿಲ್ಲೆಯ ಪ್ರಸ್ತಾವನೆ ಮುಂದಿಟ್ಟಿರುವ ಆನಂದ್ ಸಿಂಗ್ ಹೋರಾಟಕ್ಕೆ ಹಿನ್ನಡೆಯನ್ನುಂಟು ಮಾಡಲು ರೆಡ್ಡಿ ಬ್ರದರ್ಸ್ ಮುಂದಾಗಿದ್ದಾರೆ.

ಹರಪನಹಳ್ಳಿಯನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಅದೇ ಕ್ಷೇತ್ರದ ಬಿಜೆಪಿ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದಲ್ಲಿ 30ಕ್ಕೂ ಅಧಿಕ ಮಂದಿಯ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದೆ.

ಈಗಾಗಲೇ ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿಯ ಜಿಲ್ಲೆಯ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಬಲವಾಗಿ ಪಟ್ಟುಹಿಡಿದಿದ್ದಾರೆ. ಆದರೆ, ಆನಂದ್ ಸಿಂಗ್ ಅವರ ಬೇಡಿಗೆಗೆ ಬಳ್ಳಾರಿಯ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. 

ಪ್ರಮುಖವಾಗಿ ಇದೇ ಕರಣಾಕರ್ ರೆಡ್ಡಿ ಬಳ್ಳಾರಿಯಿಂದ ವಿಜಯನಗರವನ್ನು ಪ್ರತ್ಯೇಕಗೊಳಿಸಿ ಜಿಲ್ಲೆ ಮಾಡುವುದಕ್ಕೆ ಬಲವಾಗಿ ವಿರೋಧಿಸಿದ್ದರು. ಇದೀಗ ಆನಂದ್​ ಸಿಂಗ್​ ಅವರಿಗೆ ಸೆಡ್ಡು ಹೊಡೆಯಲು ಕರುಣಾಕರ್ ರೆಡ್ಡಿ ಪ್ರತ್ಯೇಕ ಜಿಲ್ಲೆಯ ತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್