ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥ್ 
ರಾಜ್ಯ

ಸೆಪ್ಟೆಂಬರ್ ನಲ್ಲಿ ಇಂಗ್ಲೆಂಡ್ ನಲ್ಲಿ ಅಂತಾರಾಷ್ಟ್ರೀಯ ಕುರುಬ ಸಮಾವೇಶ ನಡೆಸಲು ತೀರ್ಮಾನ-ಎಚ್.ಎಂ.ರೇವಣ್ಣ

ಕುರುಬ ಸಮುದಾಯವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಲು ಪ್ರಯತ್ನ ಆರಂಭವಾಗಿದ್ದು, ಸೆಪ್ಟೆಂಬರ್ ನಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆಯಿಂದ ಇಂಗ್ಲೆಂಡ್ ನಲ್ಲಿ ಬೃಹತ್ ಮಟ್ಟದ ಅಂತಾರಾಷ್ಟ್ರೀಯ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು:ಕುರುಬ ಸಮುದಾಯವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಲು ಪ್ರಯತ್ನ ಆರಂಭವಾಗಿದ್ದು, ಸೆಪ್ಟೆಂಬರ್ ನಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆಯಿಂದ ಇಂಗ್ಲೆಂಡ್ ನಲ್ಲಿ ಬೃಹತ್ ಮಟ್ಟದ ಅಂತಾರಾಷ್ಟ್ರೀಯ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ.
ಕುರುಬ ಸಮುದಾಯ ಸಂಘಟನೆ ಕುರಿತು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಚ್. ವಿಶ್ವನಾಥ್, ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂನ್ ನಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಷ್ಟ್ರಮಟ್ಟದ ಕುರುಬ ಸಮಾವೇಶ ನಡೆಸಲಾಗುವುದು. ಇದಕ್ಕೂ ಮುನ್ನ ಎಲ್ಲಾ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಸಮುದಾಯವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡುವ ಕಾರ್ಯಯೋಜನೆ ರೂಪಿಸಲಾಗಿದೆ .ದೇಶದಲ್ಲಿ ಕುರುಬ ಸಮುದಾಯದ ಜನಸಂಖ್ಯೆ 12 ಕೋಟಿಯಷ್ಟಿದ್ದು, ಸಾಮಾಜಿಕ, ಆರ್ಥಿಕ, ರಾಜಕೀಯ ಪ್ರಾತಿನಿಧ್ಯೆ ಪಡೆಯುವ ಸಲುವಾಗಿ ಸಮುದಾಯದ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದರು

ಇದೇ ತಿಂಗಳ 23 ರಂದು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಕರ್ನಾಟಕದ ರಾಜ್ಯ ಪದಾಧಿಕಾರಿ ಆಯ್ಕೆ ಮಾಡುತ್ತಿದ್ದು, ಇದೇ ರೀತಿಯಲ್ಲಿ ದೇಶಾದ್ಯಂತ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆ ಎಲ್ಲಾ ಹಿಂದುಳಿದ ವರ್ಗಗಳ ಸಮಸ್ಯೆಗಳ ಕುರಿತಂತೆ ಕಾಲಕಾಲಕ್ಕೆ ಚರ್ಚೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. 

ಹೆಚ್ ವಿಶ್ವನಾಥ್ ಮಾತನಾಡಿ, ಆಂಧ್ರಪ್ರದೇಶಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಮ್ಮ ಸಮುದಾಯಕ್ಕೆ ಐದು ಎಕರೆ ಜಮೀನು ನೀಡಿದ್ದು, ತಿರುಪತಿಯಲ್ಲೂ ಸಮುದಾಯ ಭವನ ನಿರ್ಮಿಸಲು ಭೂಮಿ ನೀಡುವ ಭರವಸೆ ಕೊಟ್ಟಿದ್ದಾರೆ ಎಂದರು. 

ಪ್ರಪಂಚದಾದ್ಯಂತ ಕುರುಬ ಸಮುದಾಯವಿದ್ದು, ಗ್ರೀಸ್, ಲಂಡನ್ ನಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚು ಮನ್ನಣೆ ಇದೆ. ವಿದೇಶಗಳಲ್ಲಿ ಕುರುಬರು ಕುರಿಗಾರಿಕೆ ಮೂಲಕ ಆರ್ಥಿಕತೆಯ‌ ಪ್ರಮುಖ ಭಾಗವಾಗಿದ್ದಾರೆ. ದೇಶದ ಹಲವು ಕಡೆ ಹಲವು ಹೆಸರುಗಳಿಂದ ಕುರುಬ ಸಮುದಾಯವನ್ನು ಕರೆಯುತ್ತಾರೆ. ಈಗ ಎಲ್ಲರೂ ಒಂದೇ ವೇದಿಕೆಗೆ ಬರಲು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನೆರವಾಗಲಿದೆ ಎಂದರು. 

ಎಚ್.ಎಂ.ರೇವಣ್ಣ ಮಾತನಾಡಿ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ.ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ಬೇಡಿಕೆ ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಿಂದಲೂ ಕುರುಬ ಸಮುದಾಯವನ್ನು ಎಸ್.ಟಿ.ಪಟ್ಟಿಗೆ ಸೇರಿಸುವಂತೆ ಶಿಫಾರಸ್ಸು ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT