ರಾಜ್ಯ

ಸಿಎಎ ಪ್ರತಿಭಟನೆ ವೇಳೆ ಪೊಲೀಸರು ಹಲ್ಲೆ ಮಾಡಿದ್ದಕ್ಕೆ ನನಗೆ ಯಾರೂ ಕ್ಷಮೆ ಕೇಳಿಲ್ಲ: ರಾಮಚಂದ್ರ ಗುಹಾ 

ಕಳೆದ ಡಿಸೆಂಬರ್ ನಲ್ಲಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಹಲ್ಲೆ ನಡೆಸಿದ ಘಟನೆಗೆ ತಮ್ಮಲ್ಲಿ ಇದುವರೆಗೆ ಯಾರೂ ಕ್ಷಮೆ ಕೇಳಿಲ್ಲ ಎಂದು ಇತಿಹಾಸ ತಜ್ಞ ರಾಮಚಂದ್ರ ಗುಹಾ ತಿಳಿಸಿದ್ದಾರೆ.

ಬೆಂಗಳೂರು; ಕಳೆದ ಡಿಸೆಂಬರ್ ನಲ್ಲಿ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಹಲ್ಲೆ ನಡೆಸಿದ ಘಟನೆಗೆ ತಮ್ಮಲ್ಲಿ ಇದುವರೆಗೆ ಯಾರೂ ಕ್ಷಮೆ ಕೇಳಿಲ್ಲ ಎಂದು ಇತಿಹಾಸ ತಜ್ಞ ರಾಮಚಂದ್ರ ಗುಹಾ ತಿಳಿಸಿದ್ದಾರೆ.


ಒಂದು ವೇಳೆ ಅಂತಹ ಕ್ಷಮೆ ಕೇಳಿದ್ದರೂ ಕೂಡ ತಾವು ಅದನ್ನು ಒಪ್ಪುತ್ತಿರಲಿಲ್ಲ ಎಂದಿದ್ದಾರೆ. ನಿನ್ನೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಕಲಾಪ ವೇಳೆ ಮಾತನಾಡುತ್ತಾ ಕಳೆದ ಡಿಸೆಂಬರ್ ನಲ್ಲಿ ರಾಮಚಂದ್ರ ಗುಹಾ ಅವರ ಮೇಲೆ ಪೊಲೀಸರು ನಡೆಸಿದ ಹಲ್ಲೆಗೆ ಸಂಬಂಧಪಟ್ಟಂತೆ ನಾನು ದೂರವಾಣಿ ಮೂಲಕ ಮಾತನಾಡಿ ಕ್ಷಮೆ ಕೇಳಿದ್ದೇನೆ ಎಂದಿದ್ದರು. ಆದರೆ ಅದು ಸುಳ್ಳು. ನನಗೆ ಅವರಿಂದ ಯಾವುದೇ ಕರೆ ಬಂದಿಲ್ಲ ಮತ್ತು ಕ್ಷಮೆಯನ್ನೂ ಕೇಳಿಲ್ಲ ಎಂದು ಗುಹಾ ಹೇಳಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ರಾಮಚಂದ್ರ ಗುಹಾ, ಒಂದು ವೇಳೆ ಅಂತಹ ಕ್ಷಮಾಪಣೆ ಬಂದಿದ್ದರೂ ಕೂಡ ನಾನು ಅದನ್ನು ತಿರಸ್ಕರಿಸುತ್ತಿದ್ದೆ. ಹೈಕೋರ್ಟ್ ಹೇಳಿರುವಂತೆ ಅಂದು ಪ್ರತಿಭಟನೆ ದಿನ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೆ ತಂದಿದ್ದು ಅಕ್ರಮ. ಆ ದಿನ ಸರ್ಕಾರದ ಅನಿಯಂತ್ರಿತ ಕ್ರಮವನ್ನು ಧಿಕ್ಕರಿಸಿದ ಸಾವಿರಾರು ಶಾಂತಿಯುತ ಪ್ರತಿಭಟನಾಕಾರರಲ್ಲಿ ನಾನು ಕೂಡ ಒಬ್ಬನಾಗಿದ್ದೆ ಎಂದು  ಹೇಳಲು ಹೆಮ್ಮೆಪಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT