ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು‌ ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ

ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಬೆಂಗಳೂರು: ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಮೊದಲು ಶಾಸಕರ ಭವನಕ್ಕೆ ಪತ್ರಕರ್ತರಿಗೆ ಮುಕ್ತ ಪ್ರವೇಶ ಇತ್ತು. ಈಗ ಶಾಸಕರ ಖಾಸಗಿತನಕ್ಕೆ ತೊಂದರೆಯಾಗುತ್ತದೆ ಎಂದು ನೆಪ ಹೇಳಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶ ‌ನಿರಾಕರಿಸಿ ಆದೇಶಿಸಿದ್ದಾರೆ. ಶಾಸಕರು ಸಂದರ್ಶನಕ್ಕೆ ಒಪ್ಪಿಗೆ ಕೊಟ್ಟರೆ ಮಾತ್ರ ಶಾಸಕರ ಭವನ ಪ್ರವೇಶಿಸಬಹುದು ಎಂದಿದ್ದಾರೆ.

ಶಾಸಕರು ತಮ್ಮಕ್ಷೇತ್ರಗಳಿಂದ ಬೆಂಗಳೂರಿಗೆ ಬಂದು ತಮ್ಮ ಕೆಲಸದ ಸಮಯದ ನಂತರ ಶಾಸಕರ ಭವನದಲ್ಲಿ ತಂಗುವುದು ಅವರ ಖಾಸಗಿ ಸಮಯವಾಗಿರುತ್ತದೆ. ಆ ಸಮಯದಲ್ಲಿ ಮಾಧ್ಯಮದವರು ಶಾಸಕರನ್ನು ಭೇಟಿ ಮಾಡಲು ಬಂದರೆ ಅದು ಶಾಸಕರ ಖಾಸಗಿತನಕ್ಕೆ ಅಡಚಣೆ ಉಂಟಾಗುತ್ತದೆ.

ಹೀಗಾಗಿ ಪ್ರಿಂಟ್ ಮೀಡಿಯಾ ಹಾಗೂ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರು ಹಾಗೂ ಕ್ಯಾಮರಾಮ್ಯಾನ್‌ಗಳಿಗೆ ಶಾಸಕರ ಭವನದ ಒಳಗೆ ಪ್ರವೇಶವನ್ನು ನೀಡಲು ಅವಕಾಶ ಇರುವುದಿಲ್ಲ. ಹೀಗಾಗಿ ಪತ್ರಕರ್ತರಿಗೆ ಶಾಸಕರ ಭವನ ಪ್ರವೇಶಕ್ಕೆ ಕೊಡಬಾರದು ಎಂದು ಆದೇಶ ಹೊರಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!