ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜ್ಯ

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು‌ ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ

ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಬೆಂಗಳೂರು: ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಮೊದಲು ಶಾಸಕರ ಭವನಕ್ಕೆ ಪತ್ರಕರ್ತರಿಗೆ ಮುಕ್ತ ಪ್ರವೇಶ ಇತ್ತು. ಈಗ ಶಾಸಕರ ಖಾಸಗಿತನಕ್ಕೆ ತೊಂದರೆಯಾಗುತ್ತದೆ ಎಂದು ನೆಪ ಹೇಳಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶ ‌ನಿರಾಕರಿಸಿ ಆದೇಶಿಸಿದ್ದಾರೆ. ಶಾಸಕರು ಸಂದರ್ಶನಕ್ಕೆ ಒಪ್ಪಿಗೆ ಕೊಟ್ಟರೆ ಮಾತ್ರ ಶಾಸಕರ ಭವನ ಪ್ರವೇಶಿಸಬಹುದು ಎಂದಿದ್ದಾರೆ.

ಶಾಸಕರು ತಮ್ಮಕ್ಷೇತ್ರಗಳಿಂದ ಬೆಂಗಳೂರಿಗೆ ಬಂದು ತಮ್ಮ ಕೆಲಸದ ಸಮಯದ ನಂತರ ಶಾಸಕರ ಭವನದಲ್ಲಿ ತಂಗುವುದು ಅವರ ಖಾಸಗಿ ಸಮಯವಾಗಿರುತ್ತದೆ. ಆ ಸಮಯದಲ್ಲಿ ಮಾಧ್ಯಮದವರು ಶಾಸಕರನ್ನು ಭೇಟಿ ಮಾಡಲು ಬಂದರೆ ಅದು ಶಾಸಕರ ಖಾಸಗಿತನಕ್ಕೆ ಅಡಚಣೆ ಉಂಟಾಗುತ್ತದೆ.

ಹೀಗಾಗಿ ಪ್ರಿಂಟ್ ಮೀಡಿಯಾ ಹಾಗೂ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರು ಹಾಗೂ ಕ್ಯಾಮರಾಮ್ಯಾನ್‌ಗಳಿಗೆ ಶಾಸಕರ ಭವನದ ಒಳಗೆ ಪ್ರವೇಶವನ್ನು ನೀಡಲು ಅವಕಾಶ ಇರುವುದಿಲ್ಲ. ಹೀಗಾಗಿ ಪತ್ರಕರ್ತರಿಗೆ ಶಾಸಕರ ಭವನ ಪ್ರವೇಶಕ್ಕೆ ಕೊಡಬಾರದು ಎಂದು ಆದೇಶ ಹೊರಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT