ಯುವತಿ ಅಮೂಲ್ಯ ಮತ್ತು ವಿಕ್ರಮ್ ಮಹೇಶ್ ಹೆಗ್ಡೆ 
ರಾಜ್ಯ

ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ: ಅಮೂಲ್ಯಗೆ ತಿರುಗೇಟು ನೀಡಿದ ಮಹೇಶ್ ವಿಕ್ರಮ್ ಹೆಗ್ಡೆ

ವಿಮಾನ ನಿಲ್ದಾಣದಲ್ಲಿ ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಅಮೂಲ್ಯಗೆ ತಿರುಗೇಟು ನೀಡಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ವಂದೇ ಮಾತರಂ ಹಾಡಿ ಎಂದು ಪೀಡಿಸಿದ್ದ ಅಮೂಲ್ಯಗೆ ತಿರುಗೇಟು ನೀಡಿರುವ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ವಂದೇ ಮಾತರಂ ಕೇಳಲೂ ಕೂಡ ಇವರು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣ ಎದುರಿಸುತ್ತಿರುವ ಅಮೂಲ್ಯ ವಿರುದ್ಧ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಕಿಡಿಕಾರಿದ್ದು, ಇಂತಹವರು ವಂದೇ ಮಾತರಂ ಕೇಳಲೂ ಕೂಡ ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿಕ್ರಮ್ ಮಹೇಶ್ ಹೆಗ್ಡೆ, 'ಇದೇ ಕಾರಣಕ್ಕೆ ನಾನು ಅಂದು ವಿಮಾನ ನಿಲ್ದಾಣದಲ್ಲಿ ಮೌನವಹಿಸಿದ್ದೆ. ಇಂತಹವರು ವಂದೇ ಮಾತರಂ ಗೀತೆ ಕೇಳಲೂ ಕೂಡ ಯೋಗ್ಯರಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಗಿಮಿಕ್ ಗಳನ್ನು ಮಾಡುತ್ತಾರೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಪೊಲೀಸರು ಕ್ರೂರವಾಗಿ ಶಿಕ್ಷಿಸಬೇಕು. ಪಾಕಿಸ್ತಾನ ಪದದಲ್ಲಿದ ಪಾ ಅಕ್ಷರವನ್ನೂ ಕೂಡ ಉಚ್ಥರಿಸಲು ಅವರು ಭಯಪಡಬೇಕು. ಇಂತಹ ಟ್ರೆಂಡ್ ಅಪಾಯಕಾರಿಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಈ ಹಿಂದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್‌ ವಿಕ್ರಂ ಹೆಗ್ಡೆ ಅವರಿಗೆ ವಂದೇ ಮಾತರಂ ಹಾಡುವಂತೆ ಪೀಡಿಸಿದ್ದರು. ಅಲ್ಲದೆ ವಂದೇ ಮಾತರಂ ಗೀತೆ ಹಾಡುವ ಮೂಲಕ ನಿಮ್ಮ ದೇಶಭಕ್ತಿ ತೋರಿಸಿ ಎಂದು ಕಾಡಿದ್ದಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT